ಘಟನೆ ಕುರಿತು ಕುಮಾರಸ್ವಾಮಿ ಶುಕ್ರವಾರ ಟ್ವಿಟರ್ನಲ್ಲಿ ಹರಿಹಾಯ್ದಿದ್ದರು. ಸುಧಾಕರ್, ಚಾಮರಾಜನಗರದ ಸುಳವಾಡಿ ದೇವಸ್ಥಾನದ ಪ್ರಸಾದ ಸೇವಿಸಿ ಹಲವರು ಮೃತಪಟ್ಟ ಘಟನೆ ಪ್ರಸ್ತಾಪಿಸಿ ತಿರುಗೇಟು ನೀಡಿದ್ದರು. ಈ ಕುರಿತು ಶನಿವಾರವೂ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ನಾಯಕ, ‘ಸುಧಾಕರ್ ಅವರು ರಾಜೀನಾಮೆ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೈತಿಕತೆ ಇದ್ದರೆ ಸಚಿವರಿಂದ ರಾಜೀನಾಮೆ ಪಡೆಯಬೇಕು’ ಎಂದು ಒತ್ತಾಯಿಸಿದ್ದಾರೆ.