ಸರ್ಕಾರ ಈಗ ಘೋಷಿಸಿರುವ ಪರಿಹಾರದ ಮೊತ್ತದಿಂದ ರೈತರ ಸಂಕಷ್ಟ ಪರಿಹಾರ ಆಗುವುದಿಲ್ಲ. ಆದ್ದರಿಂದ ಪ್ರತಿ ಜಾನುವಾರಿಗೆ ತಲಾ ₹ 50,000 ಪರಿಹಾರ ನೀಡಬೇಕು. ಜಾನುವಾರುಗಳ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಮರಣೋತ್ತರ ಪರೀಕ್ಷೆಗೂ ವೈದ್ಯರು ಸಿಗುತ್ತಿಲ್ಲ. ಜಾನುವಾರುಗಳಿಗೆ ಲಸಿಕೆ ನೀಡಲು ಮತ್ತು ಪರಿಹಾರ ಒದಗಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.