ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಸೋಮಶೇಖರ್ ಅವರು ಬಿಡಿಎ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನೀಡಿದ್ದ ಗುತ್ತಿಗೆಯಲ್ಲಿ ಅಕ್ರಮ ಎಸಗಿರುವ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಈಗ ಅವರು ಮಂತ್ರಿಯಾಗಿದ್ದಾರೆ. ಸಚಿವರಾಗಿ ಮುಂದುವರಿದರೆ ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ಸತ್ಯವನ್ನು ಮರೆಮಾಚುವ ಅಪಾಯವೂ ಇರುತ್ತದೆ. ಆದ್ದರಿಂದ ಅವರು ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುವುದು ಸೂಕ್ತ’ ಎಂದರು.