ಕಾಂಗ್ರೆಸ್ನಲ್ಲಿ ತಮಗೆ ಹೆಚ್ಚಿನ ಪ್ರಾಶಸ್ತ್ಯ ಸಿಗದ ಕಾರಣ ಬೇಸತ್ತಿರುವ ಇಬ್ರಾಹಿಂ ಅವರು ಜೆಡಿಎಸ್ಗೆ ಸೇರುವ ಬಗ್ಗೆ ಮನಸ್ಸು ಮಾಡಿದ್ದಾರೆ. ಅಲ್ಲದೆ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆಪ್ತ ವಲಯದಿಂದಲೂ ದೂರವಾಗಿದ್ದಾರೆ. ಹಿಂದೆ ಜನತಾದಳದಲ್ಲಿ ಇದ್ದಾಗ ಪಕ್ಷದ ಅಧ್ಯಕ್ಷರಾಗಿದ್ದೂ, ಅಲ್ಲದೆ ಎಚ್.ಡಿ. ದೇವೇಗೌಡ ಪ್ರಧಾನಿ ಆದಾಗ ನಾಗರಿಕ ವಿಮಾನಯಾನ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು.