<p><strong>ಬೆಂಗಳೂರು</strong>: ಕಾಂಗ್ರೆಸ್ ನಾಯಕರ ಪರಿಸ್ಥಿತಿಯು ಬಿ.ಎಸ್. ಯಡಿಯೂರಪ್ಪ ಅವರ ಮುಂದಿನ ನಡೆ ಮೇಲೆ ಅವಲಂಬಿತವಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಗುರುವಾರ ಮಾತನಾಡಿದ ಅವರು,ಯಡಿಯೂರಪ್ಪ ಮುಂದೆ ಏನು ಮಾಡುತ್ತಾರೆ ಎಂಬ ಅಂದಾ ಜಿನ ಮೇಲೆ ಕಾಂಗ್ರೆಸ್ ನಾಯಕರು ನಡೆದುಕೊಳ್ಳುತ್ತಿದ್ದಾರೆ. ಈ ಹಿಂದೆ ಯಡಿಯೂರಪ್ಪ ಬೇರೆ ಪಕ್ಷ ಕಟ್ಟಿದ್ದರು. ಆ ದಿನದ ಬಳಿಕ ಏನೇನಾಯಿತು ಎಂಬುದನ್ನು ಪರಿಗಣಿಸಿ ಕಾಂಗ್ರೆಸ್ ನಾಯಕರು ಲೆಕ್ಕಾಚಾರ ಹಾಕಿದ್ದಾರೆ. ಆ ಪಕ್ಷದ ಆಂತರಿಕ ಪರಿಸ್ಥಿತಿ ಏನೆಂಬುದು ಗೊತ್ತಿದೆ ಎಂದರು.</p>.<p>‘ಅಧಿಕಾರ ಹಿಡಿಯಬೇಕೆಂಬ ತವಕದಲ್ಲಿರುವ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ದೊಡ್ಡ ದೊಡ್ಡ ಸಮೀಕ್ಷೆ ನಡೆಸುವ ಕಂಪನಿಗಳ ಜತೆ ಸೇರಿಕೊಂಡು, ಜನಾಭಿಪ್ರಾಯ ತಿರುಚುವ ಕೆಲಸ ಮಾಡುತ್ತಿವೆ. ರಾಷ್ಟ್ರೀಯ ಪಕ್ಷಗಳ ಪರಿಸ್ಥಿತಿ ಬಗ್ಗೆ ಮಾಧ್ಯಮಗಳ ವರದಿಗಳೇ ಎಲ್ಲವನ್ನೂ ಹೇಳುತ್ತಿವೆ. ನಮಗೆ ಯಾವುದೇ ಆತಂಕ ಇಲ್ಲ’ ಎಂದರು.</p>.<p>‘ಜೆಡಿಎಸ್ನ ಕೆಲವು ಶಾಸಕರು ಸಿದ್ದರಾಮಯ್ಯ ಅವರ ಸಂಪರ್ಕದಲ್ಲಿ ಇದ್ದಾರೆ ಎಂಬ ಚರ್ಚೆ ಇದೆಯಲ್ಲ’ ಎಂಬ ಪ್ರಶ್ನೆಗೆ, ಕೆಲವರು ಅವರ ವಿಶ್ವಾಸದಲ್ಲಿ ಇರಬಹುದು. ಆದರೆ ಅವರಲ್ಲೇ ಗೊಂದಲ ಇದೆ. ಆಷಾಢ ಮಾಸದ ನಂತರ ಅದು ಹೊರ ಬರುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾಂಗ್ರೆಸ್ ನಾಯಕರ ಪರಿಸ್ಥಿತಿಯು ಬಿ.ಎಸ್. ಯಡಿಯೂರಪ್ಪ ಅವರ ಮುಂದಿನ ನಡೆ ಮೇಲೆ ಅವಲಂಬಿತವಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ಗುರುವಾರ ಮಾತನಾಡಿದ ಅವರು,ಯಡಿಯೂರಪ್ಪ ಮುಂದೆ ಏನು ಮಾಡುತ್ತಾರೆ ಎಂಬ ಅಂದಾ ಜಿನ ಮೇಲೆ ಕಾಂಗ್ರೆಸ್ ನಾಯಕರು ನಡೆದುಕೊಳ್ಳುತ್ತಿದ್ದಾರೆ. ಈ ಹಿಂದೆ ಯಡಿಯೂರಪ್ಪ ಬೇರೆ ಪಕ್ಷ ಕಟ್ಟಿದ್ದರು. ಆ ದಿನದ ಬಳಿಕ ಏನೇನಾಯಿತು ಎಂಬುದನ್ನು ಪರಿಗಣಿಸಿ ಕಾಂಗ್ರೆಸ್ ನಾಯಕರು ಲೆಕ್ಕಾಚಾರ ಹಾಕಿದ್ದಾರೆ. ಆ ಪಕ್ಷದ ಆಂತರಿಕ ಪರಿಸ್ಥಿತಿ ಏನೆಂಬುದು ಗೊತ್ತಿದೆ ಎಂದರು.</p>.<p>‘ಅಧಿಕಾರ ಹಿಡಿಯಬೇಕೆಂಬ ತವಕದಲ್ಲಿರುವ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ದೊಡ್ಡ ದೊಡ್ಡ ಸಮೀಕ್ಷೆ ನಡೆಸುವ ಕಂಪನಿಗಳ ಜತೆ ಸೇರಿಕೊಂಡು, ಜನಾಭಿಪ್ರಾಯ ತಿರುಚುವ ಕೆಲಸ ಮಾಡುತ್ತಿವೆ. ರಾಷ್ಟ್ರೀಯ ಪಕ್ಷಗಳ ಪರಿಸ್ಥಿತಿ ಬಗ್ಗೆ ಮಾಧ್ಯಮಗಳ ವರದಿಗಳೇ ಎಲ್ಲವನ್ನೂ ಹೇಳುತ್ತಿವೆ. ನಮಗೆ ಯಾವುದೇ ಆತಂಕ ಇಲ್ಲ’ ಎಂದರು.</p>.<p>‘ಜೆಡಿಎಸ್ನ ಕೆಲವು ಶಾಸಕರು ಸಿದ್ದರಾಮಯ್ಯ ಅವರ ಸಂಪರ್ಕದಲ್ಲಿ ಇದ್ದಾರೆ ಎಂಬ ಚರ್ಚೆ ಇದೆಯಲ್ಲ’ ಎಂಬ ಪ್ರಶ್ನೆಗೆ, ಕೆಲವರು ಅವರ ವಿಶ್ವಾಸದಲ್ಲಿ ಇರಬಹುದು. ಆದರೆ ಅವರಲ್ಲೇ ಗೊಂದಲ ಇದೆ. ಆಷಾಢ ಮಾಸದ ನಂತರ ಅದು ಹೊರ ಬರುತ್ತದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>