‘ಆ ಮುಸ್ಲಿಂ ಅಭ್ಯರ್ಥಿಯ ಗೆಲುವಿಗಾಗಿ ಮಾಜಿ ಪ್ರಧಾನಿ ದೇವೇಗೌಡರು ಗಲ್ಲಿ, ಗಲ್ಲಿ ಸುತ್ತಿ ಬೆವರು ಹರಿಸಿದ್ದರು. ದೇವೇಗೌಡರಂತಹವರು ಕಷ್ಟಪಟ್ಟು ಉಪಚುನಾವಣೆ ನಡೆಸಿದ್ದು ಬಿಜೆಪಿಯನ್ನು ಗೆಲ್ಲಿಸುವುದಕ್ಕಾಗಿಯೆ? ಇದಕ್ಕೆ ಸನ್ಮಿತ್ರರು ಆತ್ಮಸಾಕ್ಷಿಯಿಂದ, ಮನದಾಳದಿಂದ, ಪ್ರಾಮಾಣಿಕ ಉತ್ತರ ಕೊಡಬಹುದೆ’ ಎಂದು ಟ್ವಿಟರ್ನಲ್ಲಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.