ನಗರಗಳು, ಪಟ್ಟಣಗಳು ಮತ್ತು ದೂರದ ಹಳ್ಳಿಗಳಲ್ಲಿನ ದುರ್ಬಲ ಜನರ ಮಿದುಳು ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು. ಹೀಗಾಗಿ, ರಾಬಿನ್ ಉತ್ತಪ್ಪ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ. ಈ ನೇಮಕಾತಿಯು ಮೂರು ವರ್ಷಗಳವರೆಗೆ ಜಾರಿ ಇರಲಿದ್ದು, ಸಾರ್ವಜನಿಕರ ಹಿತಾಸಕ್ತಿಯಿಂದ ಸಂಭಾವನೆರಹಿತವಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.