ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಇಲ್ಲಿ ಹಮ್ಮಿಕೊಂಡಿದ್ದ36ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿದ ಅವರು, ‘ಪತ್ರಕರ್ತರಿಗೆ ಹೆಚ್ಚಿನ ಸವಲತ್ತು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ರಾಜ್ಯದ ಯಾವ ಪತ್ರಿಕೆಯೂ ಹಣಕಾಸಿನ ಬಿಕ್ಕಟ್ಟಿನಿಂದಾಗಿ ಮುದ್ರಣ ನಿಲ್ಲಿಸಬಾರದು ಎಂಬ ಕಾಳಜಿ ಸರ್ಕಾರಕ್ಕಿದೆ. ಆದ್ದರಿಂದ ನಿರಂತರವಾಗಿ ಜಾಹೀರಾತು ಬಿಡುಗಡೆ ಮಾಡುತ್ತಿದೆ’ ಎಂದರು.