ನಗರದ ದಂಪತಿ ವಿಮಾ ಒಂಬುಡ್ಸ್ಮನ್ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ, ‘ಮೆಡಿಕ್ಲೈಮ್ ಪಾಲಿಸಿ ಎನ್ನುವುದು ಒಂದು ಬಗೆಯ ಒಪ್ಪಂದ. ಆ ಒಪ್ಪಂದ ವಿಶ್ವಾಸದ ತಳಹದಿಯ ಮೇಲೆ ನಿಂತಿರುತ್ತದೆ.ಪಾಲಿಸಿ ಪಡೆದವರಿಗೆ ಮೊದಲೇ ಅನಾರೋಗ್ಯ ಇತ್ತೆಂಬ ಅಂಶದ ಆಧಾರದಲ್ಲಿ ಕಂಪನಿ ಪಾಲಿಸಿಯನ್ನು ನಿರಾಕರಿಸಿದರೆ ಅದರಲ್ಲಿ ದೋಷ ಹುಡುಕಲಾಗದು‘ ಎಂದು ತಿಳಿಸಿದೆ.