ಈಯೋಜನೆಯಡಿಎಸ್ಸಿ ಮತ್ತುಎಸ್ಟಿ ವರ್ಗದವರಿಗೆಹೆಚ್ಚು ಚಿಕಿತ್ಸಾ ವೆಚ್ಚ ತಗುಲುವ ಕಾಯಿಲೆಗಳಿಗೂ ಉಚಿತ ಚಿಕಿತ್ಸೆ ಒದಗಿಸಲು ಸರ್ಕಾರ ನಿರ್ಧರಿಸಿದೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ನಿಂದ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ.ಕುಸುಮ ರೋಗ, ಥಲಸೀಮಿಯಾ, ಸಿಕಲ್ ಸೆಲ್ ಅನಿಮಿಯಾ ಮೊದಲಾದ ವಿರಳ ಕಾಯಿಲೆಗಳಿಗೆ ಯೋಜನೆಯಡಿ ಈ ಮೊದಲು ಚಿಕಿತ್ಸೆ ದೊರೆಯುತ್ತಿರಲಿಲ್ಲ. ಆದ್ದರಿಂದಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವಿರಳ ಕಾಯಿಲೆಗಳ ಚಿಕಿತ್ಸೆ ಹಾಗೂ ವೆಚ್ಚದ ಪಟ್ಟಿಯನ್ನು ಸಿದ್ಧಪಡಿಸಿ, ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ. ಇದರ ಜತೆಗೆ ಅಧಿಕ ವೆಚ್ಚ ತಗುಲುವ ಕಾಯಿಲೆಗಳ ಚಿಕಿತ್ಸಾ ವಿಧಾನಗಳನ್ನು ಗುರುತಿಸಿ, ಅವುಗಳಿಗೂ ವೆಚ್ಚ ನಿಗದಿಗೆ ಕ್ರಮ ವಹಿಸಲಾಗಿದೆ.