ಬೆಂಗಳೂರು: ‘ಪಕ್ಕದ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಇದು ರಾಜ್ಯಕ್ಕೆ ಎಚ್ಚರಿಕೆಯ ಗಂಟೆಯಾಗಿದ್ದು ಎಲ್ಲರೂ ಜಾಗರೂಕರಾಗಿರಬೇಕು’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಹಬ್ಬದ ಸಂದರ್ಭಗಳಲ್ಲಿ, ಸಭೆ–ಸಮಾರಂಭಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಅಂತರವನ್ನು ಕಾಪಾಡಿಕೊಳ್ಳಬೇಕು ಹಾಗೂ ಜನಸಂದಣಿಯಿಂದ ದೂರವಿರಬೇಕು’ ಎಂದು ಸಲಹೆ ನೀಡಿದ್ದಾರೆ.
ಲಸಿಕೆ ಪಡೆಯಲು ಮುಂದಾಗಿ: ‘60 ವರ್ಷ ಮೇಲ್ಪಟ್ಟವರು, ಗಂಭೀರ ಕಾಯಿಲೆ ಇರುವ 45 ವರ್ಷ ಮೇಲ್ಪಟ್ಟು ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಬೇಕು’ ಎಂದೂ ಅವರು ಕೋರಿದ್ದಾರೆ.
ನೆರೆಹೊರೆಯವರು, ಲಸಿಕೆ ಹಾಕಿಸುವಂತೆ ಅರಿವು ಮೂಡಿಸಿ ಎಂದೂ ಅವರು ಮನವಿ ಮಾಡಿದ್ದಾರೆ.
ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇದು ನನ್ನನ್ನು ಚಿಂತೆಗೀಡುಮಾಡಿದೆ.
ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದು, ಭೌತಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು. 1/3