ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ ಕಾರಣದಿಂದ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇನೆ.
ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಅಮ್ಮ, ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿದ್ದರು. pic.twitter.com/D94Lzg5Do6
ಆರೋಗ್ಯ ಸಚಿವ ಶ್ರೀರಾಮುಲು ರವರ ಮಾತೃಶ್ರೀ ರವರು ದೈವಧೀನರಾದ ವಿಷಯ ಕೇಳಿ ಅತೀವ ದುಃಖವಾಗಿದೆ. ಅವರಿಗೆ ಸದ್ಗತಿಯನ್ನು ಕೋರುತ್ತಾ, ಶ್ರೀರಾಮುಲು ಸೇರಿದಂತೆ ಅವರ ಕುಟುಂಬದವರೆಲ್ಲರಿಗೂ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.