ಇಲಾಖೆ ಆಯುಕ್ತ ಡಾ. ತ್ರಿಲೋಕ್ ಚಂದ್ರ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದಾರೆ. ಕೋವಿಡ್ ಎರಡನೇ ಅಲೆಯಲ್ಲಿ ಅನಿರೀಕ್ಷಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ವರದಿಯಾಗಿವೆ. ಪರಿಣಾಮ ಬ್ಯಾಕ್ಟೀರಿಯಾ ಮತ್ತು ಶಿಲೀಂಧ್ರ ಸೋಂಕು ದೃಢ ಪ್ರಮಾಣವು ಹೆಚ್ಚಳವಾಗಿದೆ. ಕಪ್ಪು ಶಿಲೀಂಧ್ರ ಸೋಂಕು ಗಂಭೀರ ಸ್ವರೂಪದ್ದಾಗಿದ್ದು, ಜೀವಕ್ಕೆ ಅಪಾಯವನ್ನು ತಂದೊಡ್ಡಲಿದೆ. ಆದ್ದರಿಂದ ಈ ಸೋಂಕನ್ನು ನಿಯಂತ್ರಿಸಲು ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿನ ಸಿಬ್ಬಂದಿ ಗಮನಹರಿಸಬೇಕು’ ಎಂದು ತಿಳಿಸಿದ್ದಾರೆ.