ಗುತ್ತಿಗೆ ನೌಕರರಿಗೆ ಪ್ರತಿ ವರ್ಷ ಏಪ್ರಿಲ್ 1ರಂದು ‘ಒಂದು ದಿನ ವಿರಾಮ’ ನೀಡುವ ಪದ್ಧತಿ ಜಾರಿಯಲ್ಲಿದೆ. ಇದನ್ನು ರದ್ದುಪಡಿಸುವಂತೆ ನೌಕರರು ಆಗ್ರಹಿಸಿದ್ದರು. ಆದರೆ, ಇಲಾಖೆ ಈ ಬಗ್ಗೆ ಕ್ರಮಕೈಗೊಳ್ಳದಿದ್ದರಿಂದಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ನೌಕರರು ಪ್ರತಿಭಟನೆ ನಡೆಸಿದರು.