ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿಯಲ್ಲಿ ಭಾರಿ ಮಳೆ: ಪ್ರವಾಹಕ್ಕೆ ಕೊಚ್ಚಿ ಹೋದ ಕಾರು 

Last Updated 11 ಅಕ್ಟೋಬರ್ 2020, 17:00 IST
ಅಕ್ಷರ ಗಾತ್ರ

ಬೆಳಗಾವಿ: ಜಿಲ್ಲೆಯ ಹುಕ್ಕೇರಿಯಲ್ಲಿ ಭಾನುವಾರ ಭಾರಿ ಮಳೆ ಸುರಿಯಿತು.‌

ನಿರಂತರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ಯವ್ಯಸ್ತವಾಗಿತ್ತು. ಮಳೆಯಿಂದಾಗಿ ಸೃಷ್ಟಿಯಾದ ಪ್ರವಾಹಕ್ಕೆ ನಿಂತಿದ್ದ ಕಾರೊಂದು ನೀರಿನಲ್ಲಿ ಕೊಚ್ಚಿಕೊಂಡು ಹೋಯಿತು. ಈ ವಿಡಿಯೊ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ.

ವೃದ್ಧರೊಬ್ಬರು ನೀರಿನ ಸೆಳೆತಕ್ಕೆ ಸಿಲುಕಿದ್ದರು. ಯುವಕನೊಬ್ಬ ವಿದ್ಯುತ್ ಕಂಬದ ಆಸರೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಮಳೆಯಿಂದ ಗ್ಯಾರೇಜ್ ಕುಸಿದು ವ್ಯಕ್ತಿ ಸಾವು
ಬೆಳಗಾವಿ:
ಜಿಲ್ಲೆಯ ಹುಕ್ಕೇರಿಯಲ್ಲಿ ಸುರಿದ ಜೋರು ಮಳೆಯಿಂದಾಗಿ ಗ್ಯಾರೇಜ್ ಕುಸಿದುಬಿದ್ದು, ಅದರೊಳಗಿದ್ದ ವ್ಯಕ್ತಿ ಮೃತರಾದರು.

ಅವರನ್ನು ಅಸ್ಲಂ ಮೀರಾಸಾಬ್ ಅಲ್ಲಾಖಾನ್ (52) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಉಪವಿಭಾಗಾಧಿಕಾರಿ ಅಶೋಕ ತೇಲಿ ಭೇಟಿ ನೀಡಿದ್ದರು.

ಹುಕ್ಕೇರಿಯಲ್ಲಿ ಮಳೆಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ತಾಲ್ಲೂಕು ಆಡಳಿತದಿಂದ ನೆರವು ಕಲ್ಪಿಸಲಾಗಿದೆ. ಸಂತ್ರಸ್ತರಿಗೆ ಊಟದ ವ್ಯವಸ್ಥೆ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT