ಖಾನಾಪುರ ತಾಲ್ಲೂಕಿನಲ್ಲಿ ಉತ್ತಮ ಮಳೆ ಆಗುತ್ತಿರುವ ಪರಿಣಾಮ ಸವದತ್ತಿ ತಾಲ್ಲೂಕಿನ ನವಿಲುತೀರ್ಥ (ಮಲಪ್ರಭಾ) ಜಲಾಶಯಕ್ಕೆ 19,990 ಕ್ಯುಸೆಕ್ ಒಳಹರಿವಿದ್ದು, 11,264 ಕ್ಯುಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಆ ತಾಲ್ಲೂಕಿನ ಮುನವಳ್ಳಿಯ ಹಳೆಯ ಸೇತುವೆ ಮುಳುಗಡೆಯಾಗಿದೆ. ಒಳಹರಿವಿನ ಪ್ರಮಾಣ ಹೆಚ್ಚುತ್ತಿರುವುದರಿಂದ ಹೊರಹರಿವು ಕೂಡ ಜಾಸ್ತಿಯಾಗಲಿದ್ದು, ನದಿ ತೀರದ ಜನರು ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಮುನವಳ್ಳಿ ಪುರಸಭೆಯಿಂದ ಧ್ವನಿವರ್ಧಕದ ಮೂಲಕ ಮಾಹಿತಿ ನೀಡಲಾಗಿದೆ.