<p><strong>ಕಲಬುರ್ಗಿ/ಮಂಗಳೂರು/ಮಡಿಕೇರಿ:</strong> ಕಲ್ಯಾಣ ಕರ್ನಾಟಕ, ಕರಾವಳಿ ಜಿಲ್ಲೆಗಳು ಹಾಗೂ ಕೊಡಗಿನಲ್ಲಿ ಮಂಗಳವಾರ ಉತ್ತಮ ಮಳೆಯಾಗಿದೆ.</p>.<p>ಮಹಾರಾಷ್ಟ್ರದ ಹಲವೆಡೆ ಭಾರಿ ಮಳೆ ಸುರಿಯುತ್ತಿರುವುದರಿಂದ ಭೀಮಾ ನದಿ ತುಂಬಿ ಹರಿಯು<br />ತ್ತಿದೆ.ಮಂಗಳವಾರ 95 ಸಾವಿರ ಕ್ಯುಸೆಕ್ ನೀರನ್ನುಸನ್ನತಿ ಬ್ರಿಜ್ ಕಂ ಬ್ಯಾರೇಜ್ನಿಂದ ಭೀಮಾ ನದಿಗೆ ಹರಿಸಲಾಗುತ್ತಿದೆ.</p>.<p>ಯಾದಗಿರಿ ಜಿಲ್ಲೆಯ ಭೀಮಾ ನದಿ ಸೇತುವೆ ಬಳಿ ಇರುವ ಕಂಗಳೇಶ್ವರ ಹಾಗೂ ವಿರಾಂಜನೇಯ ದೇಗುಲಗಳು ಜಲಾವೃತವಾಗಿವೆ. ಯಾದಗಿರಿ ನಗರ ಸೇರಿದಂತೆ ಜಿಲ್ಲೆಯ ಶಹಾಪುರ, ಸುರಪುರ, ಯಾದಗಿರಿ, ಗುರುಮಠಕಲ್, ವಡಗೇರಾ, ಹುಣಸಗಿ ತಾಲ್ಲೂಕಿನಲ್ಲಿ ಮಳೆಯಾಗಿದೆ.</p>.<p>ಕಲಬುರ್ಗಿ ನಗರ ಸೇರಿದಂತೆ ಆಳಂದ, ಚಿಂಚೋಳಿ, ಕಾಳಗಿ, ಯಡ್ರಾಮಿ, ಸೇಡಂ, ಚಿತ್ತಾಪುರ ತಾಲ್ಲೂಕಿನ ಹಲವೆಡೆ ಮಳೆಯಾಗಿದೆ. ಚಿಂಚೋಳಿ ತಾಲ್ಲೂಕಿನ 20 ಕೆರೆಗಳು ಈಚೆಗೆ ಸುರಿದ ಮಳೆಯಿಂದಾಗಿ ಭರ್ತಿಯಾಗಿವೆ.</p>.<p>ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಕಾರಂಜಾ ಜಲಾಶಯ, ಬಸವಕಲ್ಯಾಣ ತಾಲ್ಲೂಕಿನ ಚುಳಕಿನಾಲಾ, ಮೇಲ್ದಂಡೆ ಮುಲ್ಲಾಮರಿ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹರಿಯ ಬಿಡಲಾಗುತ್ತಿದೆ.</p>.<p>ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಬೆಳೆಗಳು ನೀರಿನಲ್ಲಿ ಮುಳುಗಿವೆ. ಮಳೆ ಕಾರಣ ಬೆಳೆ ಸಮೀಕ್ಷೆಗೆ ತೊಡಕಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p class="Subhead">ಕರಾವಳಿಯಲ್ಲಿ ಉತ್ತಮ ಮಳೆ: ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆ ಮುಂದುವರಿದಿದ್ದು, ಒಂದು ಮನೆಗೆ ಭಾಗಶಃ ಹಾನಿಯಾಗಿದೆ. 4 ವಿದ್ಯುತ್ ಕಂಬಗಳು ಹಾಗೂ 200<br />ಮೀಟರ್ ವಿದ್ಯುತ್ ಮಾರ್ಗಕ್ಕೆ ಹಾನಿಯಾಗಿದೆ.</p>.<p class="rteindent1">ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಣಿಯಲ್ಲಿ 10.9 ಸೆಂ.ಮೀ ಮಳೆಯಾಗಿದೆ. ಬೈಂದೂರು ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ಮರಬಿದ್ದು ಮನೆಗೆ ಹಾನಿಯಾಗಿದೆ. ಸೆ.12ರವರೆಗೆ ಕರಾವಳಿಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p class="Subhead">ವ್ಯಕ್ತಿ ಸಾವು(ಶಿವಮೊಗ್ಗವರದಿ): ಸಂತೇಬೆನ್ನೂರು ಸಮೀಪದ ದೊಡ್ಡಮಲ್ಲಾಪುರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನಗೋಡೆ ಕುಸಿದು ದೇವೇಂದ್ರಪ್ಪ (65) ಸಾವನ್ನಪ್ಪಿದ್ದಾರೆ.</p>.<p class="Subhead">ಕೊಡಗಿನ ವಿವಿಧೆಡೆ ಧಾರಾಕಾರ ಮಳೆ: ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಭಾಗಮಂಡಲ, ಮಾದಾಪುರ, ಸುಂಟಿಕೊಪ್ಪ, ಗರ್ವಾಲೆ, ಸೂರ್ಲಬ್ಬಿ ಭಾಗದಲ್ಲಿ ಮಂಗಳವಾರ ದಿನವಿಡೀ ಧಾರಾಕಾರ ಮಳೆಯಾಗಿದೆ. ಜಿಲ್ಲೆಯಲ್ಲಿ ಮತ್ತೆ ಬಿರುಸಿನ ಮಳೆಯಾಗುತ್ತಿದ್ದು<br />ನದಿಗಳಲ್ಲಿ ನೀರಿನಮಟ್ಟ ಏರಿಕೆ ಕಂಡು<br />ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ/ಮಂಗಳೂರು/ಮಡಿಕೇರಿ:</strong> ಕಲ್ಯಾಣ ಕರ್ನಾಟಕ, ಕರಾವಳಿ ಜಿಲ್ಲೆಗಳು ಹಾಗೂ ಕೊಡಗಿನಲ್ಲಿ ಮಂಗಳವಾರ ಉತ್ತಮ ಮಳೆಯಾಗಿದೆ.</p>.<p>ಮಹಾರಾಷ್ಟ್ರದ ಹಲವೆಡೆ ಭಾರಿ ಮಳೆ ಸುರಿಯುತ್ತಿರುವುದರಿಂದ ಭೀಮಾ ನದಿ ತುಂಬಿ ಹರಿಯು<br />ತ್ತಿದೆ.ಮಂಗಳವಾರ 95 ಸಾವಿರ ಕ್ಯುಸೆಕ್ ನೀರನ್ನುಸನ್ನತಿ ಬ್ರಿಜ್ ಕಂ ಬ್ಯಾರೇಜ್ನಿಂದ ಭೀಮಾ ನದಿಗೆ ಹರಿಸಲಾಗುತ್ತಿದೆ.</p>.<p>ಯಾದಗಿರಿ ಜಿಲ್ಲೆಯ ಭೀಮಾ ನದಿ ಸೇತುವೆ ಬಳಿ ಇರುವ ಕಂಗಳೇಶ್ವರ ಹಾಗೂ ವಿರಾಂಜನೇಯ ದೇಗುಲಗಳು ಜಲಾವೃತವಾಗಿವೆ. ಯಾದಗಿರಿ ನಗರ ಸೇರಿದಂತೆ ಜಿಲ್ಲೆಯ ಶಹಾಪುರ, ಸುರಪುರ, ಯಾದಗಿರಿ, ಗುರುಮಠಕಲ್, ವಡಗೇರಾ, ಹುಣಸಗಿ ತಾಲ್ಲೂಕಿನಲ್ಲಿ ಮಳೆಯಾಗಿದೆ.</p>.<p>ಕಲಬುರ್ಗಿ ನಗರ ಸೇರಿದಂತೆ ಆಳಂದ, ಚಿಂಚೋಳಿ, ಕಾಳಗಿ, ಯಡ್ರಾಮಿ, ಸೇಡಂ, ಚಿತ್ತಾಪುರ ತಾಲ್ಲೂಕಿನ ಹಲವೆಡೆ ಮಳೆಯಾಗಿದೆ. ಚಿಂಚೋಳಿ ತಾಲ್ಲೂಕಿನ 20 ಕೆರೆಗಳು ಈಚೆಗೆ ಸುರಿದ ಮಳೆಯಿಂದಾಗಿ ಭರ್ತಿಯಾಗಿವೆ.</p>.<p>ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಕಾರಂಜಾ ಜಲಾಶಯ, ಬಸವಕಲ್ಯಾಣ ತಾಲ್ಲೂಕಿನ ಚುಳಕಿನಾಲಾ, ಮೇಲ್ದಂಡೆ ಮುಲ್ಲಾಮರಿ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಹರಿಯ ಬಿಡಲಾಗುತ್ತಿದೆ.</p>.<p>ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಬೆಳೆಗಳು ನೀರಿನಲ್ಲಿ ಮುಳುಗಿವೆ. ಮಳೆ ಕಾರಣ ಬೆಳೆ ಸಮೀಕ್ಷೆಗೆ ತೊಡಕಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p>.<p class="Subhead">ಕರಾವಳಿಯಲ್ಲಿ ಉತ್ತಮ ಮಳೆ: ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆ ಮುಂದುವರಿದಿದ್ದು, ಒಂದು ಮನೆಗೆ ಭಾಗಶಃ ಹಾನಿಯಾಗಿದೆ. 4 ವಿದ್ಯುತ್ ಕಂಬಗಳು ಹಾಗೂ 200<br />ಮೀಟರ್ ವಿದ್ಯುತ್ ಮಾರ್ಗಕ್ಕೆ ಹಾನಿಯಾಗಿದೆ.</p>.<p class="rteindent1">ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಕೋಣಿಯಲ್ಲಿ 10.9 ಸೆಂ.ಮೀ ಮಳೆಯಾಗಿದೆ. ಬೈಂದೂರು ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ಮರಬಿದ್ದು ಮನೆಗೆ ಹಾನಿಯಾಗಿದೆ. ಸೆ.12ರವರೆಗೆ ಕರಾವಳಿಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.</p>.<p class="Subhead">ವ್ಯಕ್ತಿ ಸಾವು(ಶಿವಮೊಗ್ಗವರದಿ): ಸಂತೇಬೆನ್ನೂರು ಸಮೀಪದ ದೊಡ್ಡಮಲ್ಲಾಪುರ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಮನಗೋಡೆ ಕುಸಿದು ದೇವೇಂದ್ರಪ್ಪ (65) ಸಾವನ್ನಪ್ಪಿದ್ದಾರೆ.</p>.<p class="Subhead">ಕೊಡಗಿನ ವಿವಿಧೆಡೆ ಧಾರಾಕಾರ ಮಳೆ: ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು, ಭಾಗಮಂಡಲ, ಮಾದಾಪುರ, ಸುಂಟಿಕೊಪ್ಪ, ಗರ್ವಾಲೆ, ಸೂರ್ಲಬ್ಬಿ ಭಾಗದಲ್ಲಿ ಮಂಗಳವಾರ ದಿನವಿಡೀ ಧಾರಾಕಾರ ಮಳೆಯಾಗಿದೆ. ಜಿಲ್ಲೆಯಲ್ಲಿ ಮತ್ತೆ ಬಿರುಸಿನ ಮಳೆಯಾಗುತ್ತಿದ್ದು<br />ನದಿಗಳಲ್ಲಿ ನೀರಿನಮಟ್ಟ ಏರಿಕೆ ಕಂಡು<br />ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>