<figcaption>"ರಾಯಚೂರಿನ ಬಸವನಭಾವಿ ಚೌಕ್ ಸಮೀಪ ರಾಜ್ಯಹೆದ್ದಾರಿಯಲ್ಲಿ ಹರಿಯುತ್ತಿದ್ದ ನೀರಿನ ರಭಸಕ್ಕೆ ಬೈಕ್ ಕೊಚ್ಚಿಹೋಗುವುದನ್ನು ತಡೆಯಲು ಸವಾರ ಹರಸಾಹಸಪಟ್ಟರು."</figcaption>.<figcaption>""</figcaption>.<p><strong>ಬೆಂಗಳೂರು:</strong> ಉತ್ತರ ಕರ್ನಾಟಕ ಭಾಗದಲ್ಲಿ ಶುಕ್ರವಾರ ರಾತ್ರಿಯಿಂದ ಶನಿವಾರದವರೆಗೆ ಭಾರಿ ಮಳೆ ಆಗಿದೆ. ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಗ್ರಾಮೀಣ ಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.</p>.<p>ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಒಂಟಗೋಡಿ ಗ್ರಾಮದ ಹಳ್ಳದ ಸೇತುವೆ ಮೇಲೆ ಬೈಕ್ ಚಲಾಯಿಸುತ್ತಿದ್ದ ಗ್ರಾಮದ ನಿವಾಸಿ, ಬ್ಯಾಂಕ್ ಉದ್ಯೋಗಿ ಸಂತೋಷ ಅಡವಿ (30) ನೀರಿನ ರಭಸಕ್ಕೆ ಸಿಲುಕಿ, ಕೊಚ್ಚಿಕೊಂಡು ಹೋಗಿ ಮೃತರಾಗಿದ್ದಾರೆ. ಮೃತದೇಹ ಪತ್ತೆಯಾಗಿದೆ.</p>.<p>ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ನದಿ–ಹಳ್ಳಗಳು ಉಕ್ಕಿ ಹರಿಯುತ್ತಿವೆ. ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ.ಎರಡು ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.</p>.<p>ಕಲಬುರ್ಗಿ ನಗರದ ಮುಖ್ಯರಸ್ತೆಯ 60ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ.</p>.<p>ಕಾಗಿಣಾ ನದಿ ಪ್ರವಾಹದಿಂದಾಗಿ ಮಳಖೇಡ ಬಳಿಯ ಸೇತುವೆ ಮುಳುಗಿದೆ.ಕಲಬುರ್ಗಿ– ಉದನೂರು, ಮುಧೋಳ– ಕೊತ್ತಪಲ್ಲಿ ರಸ್ತೆಗಳ ಮೇಲೆ ನೀರು ನುಗ್ಗಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಜೇವರ್ಗಿ ಪಟ್ಟಣದ ಮುಖ್ಯರಸ್ತೆ ಕೊಚ್ಚಿಕೊಂಡು ಹೋಗಿದೆ.</p>.<p>ಕಾಳಗಿಯ ಐತಿಹಾಸಿಕ ನೀಲಕಂಠ ಕಾಳೇಶ್ವರ ದೇವಸ್ಥಾನ, ಚಿಂಚೋಳಿ ತಾಲ್ಲೂಕಿನ ರುದ್ನೂರು ಗ್ರಾಮದ ಐತಿಹಾಸಿಕ ತೋಂಟದ ಸಿದ್ಧೇಶ್ವರ ಮಠ, ಮಳಖೇಡ ಸಮೀಪದ ಉತ್ತರಾದಿಮಠ ಜಲಾವೃತವಾಗಿವೆ.</p>.<p>‘ಜಿಲ್ಲೆಯಲ್ಲಿ ಮುಂಗಾರು ಆರಂಭದಿಂದ ಇಲ್ಲಿಯವರೆಗೆ ಶೇ 46ರಷ್ಟು ಹೆಚ್ಚುವರಿ ಮಳೆ ಬಿದ್ದಿದ್ದು, ದಶಕದಲ್ಲೇ ಇದು ದಾಖಲೆ’ ಎಂದು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.</p>.<p>ಯಾದಗಿರಿ ಜಿಲ್ಲೆಯಲ್ಲಿ ಭತ್ತ ಮತ್ತು ಹತ್ತಿ ಬೆಳೆ ನೆಲಕ್ಕಚ್ಚಿದೆ. ಸೈದಾಪುರ ಪಟ್ಟಣಕ್ಕೆ ಸಂರ್ಪಕ ಕಲ್ಪಿಸುವ ಬೆಳಗುಂದಿರಸ್ತೆಬಂದ್ ಆಗಿದೆ.</p>.<p>ರಾಯಚೂರು ಮತ್ತು ಲಿಂಗಸುಗೂರು ತಾಲ್ಲೂಕುಗಳಲ್ಲಿ ಅತಿಹೆಚ್ಚು ಮಳೆ ಸುರಿದಿದೆ. ಯರಮರಸ್ ಸಮೀಪ ಮಳೆ ನೀರಿನ ರಭಸಕ್ಕೆ ಕಾರು ನಿಯಂತ್ರಣ ತಪ್ಪಿ ಮಗುಚಿದ್ದು, ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಬೀದರ್ ಜಿಲ್ಲೆಯಔರಾದ್ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದೆ.</p>.<div style="text-align:center"><figcaption><strong>ರಾಯಚೂರಿನ ಬಸವನಭಾವಿ ಚೌಕ್ ಸಮೀಪ ರಾಜ್ಯಹೆದ್ದಾರಿಯಲ್ಲಿ ಹರಿಯುತ್ತಿದ್ದ ನೀರಿನ ರಭಸಕ್ಕೆ ಬೈಕ್ ಕೊಚ್ಚಿಹೋಗುವುದನ್ನು ತಡೆಯಲು ಸವಾರ ಹರಸಾಹಸಪಟ್ಟರು.</strong></figcaption></div>.<p class="Subhead"><strong>ಉತ್ತಮ ಮಳೆ:</strong> ಧಾರವಾಡ, ವಿಜಯಪುರ, ಬಳ್ಳಾರಿ, ಬೆಳಗಾವಿ, ಬಾಗಲಕೋಟೆ, ಕಾರವಾರ, ಶಿರಸಿ, ಹಾವೇರಿ ಹಾಗೂ ಗದಗ ಜಿಲ್ಲೆಯಲ್ಲಿ ಮಳೆಯಾಗಿದೆ.</p>.<p>ಬೆಳಗಾವಿ ಜಿಲ್ಲೆಯ ಕೌಜಲಗಿ ಸಮೀಪದ ರಡ್ಡೇರಟ್ಟಿ ಹಳ್ಳದ ಚಿಕ್ಕ ಸೇತುವೆ ಮೇಲೆ 260 ಚೀಲ ಸಕ್ಕರೆ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ. ಲಾರಿ ಚಾಲಕನಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.</p>.<p>ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 8 ಹಾಗೂ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನಲ್ಲಿ 21 ಮನೆಗಳಿಗೆ ಹಾನಿಯುಂಟಾಗಿದೆ.</p>.<p>ಗದಗ ಜಿಲ್ಲೆಯ ಗಜೇಂದ್ರಗಡ ವ್ಯಾಪ್ತಿಯಲ್ಲಿ ಸುರಿದ ಮಳೆಗೆ ಹಲವು ಮನೆಗಳ ಗೋಡೆಗಳು ಕುಸಿದು ಬಿದ್ದಿವೆ. ನರಗುಂದ ತಾಲ್ಲೂಕಿನ ಗುರ್ಲಕಟ್ಟಿ ಗ್ರಾಮದ ಬಳಿಯ ಸೇತುವೆ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಗುರ್ಲಕಟ್ಟಿ ಹಾಗೂ ಕಣಕೀಕೊಪ್ಪದಿಂದ ನರಗುಂದ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದೆ.</p>.<p>ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದಲ್ಲಿಅತಿ ಹೆಚ್ಚು, 10.03 ಸೆಂ.ಮೀ ಮಳೆ ದಾಖಲಾಗಿದೆ. 15 ಮನೆಗಳು ಕುಸಿದಿವೆ. ರಬಕವಿ ಬನಹಟ್ಟಿಯಲ್ಲಿ ಶುಕ್ರವಾರ ಸಂಜೆ ಮತ್ತು ಶನಿವಾರ ಬೆಳಗ್ಗೆ ಸುರಿದ ಭಾರಿ ಮಳೆಗೆ ಸ್ಥಳೀಯ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ಅಂಜುಮನ್ ಎ ಇಸ್ಲಾಂ ಸರ್ಕಾರಿ ಕನ್ನಡ ಗಂಡು ಮಕ್ಕಳ ಉರ್ದು ಶಾಲೆಯ ಕಟ್ಟಡ ಕುಸಿದುಬಿದ್ದಿದೆ.</p>.<p>ಕೊಡಗು, ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>"ರಾಯಚೂರಿನ ಬಸವನಭಾವಿ ಚೌಕ್ ಸಮೀಪ ರಾಜ್ಯಹೆದ್ದಾರಿಯಲ್ಲಿ ಹರಿಯುತ್ತಿದ್ದ ನೀರಿನ ರಭಸಕ್ಕೆ ಬೈಕ್ ಕೊಚ್ಚಿಹೋಗುವುದನ್ನು ತಡೆಯಲು ಸವಾರ ಹರಸಾಹಸಪಟ್ಟರು."</figcaption>.<figcaption>""</figcaption>.<p><strong>ಬೆಂಗಳೂರು:</strong> ಉತ್ತರ ಕರ್ನಾಟಕ ಭಾಗದಲ್ಲಿ ಶುಕ್ರವಾರ ರಾತ್ರಿಯಿಂದ ಶನಿವಾರದವರೆಗೆ ಭಾರಿ ಮಳೆ ಆಗಿದೆ. ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಗ್ರಾಮೀಣ ಪ್ರದೇಶದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.</p>.<p>ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಒಂಟಗೋಡಿ ಗ್ರಾಮದ ಹಳ್ಳದ ಸೇತುವೆ ಮೇಲೆ ಬೈಕ್ ಚಲಾಯಿಸುತ್ತಿದ್ದ ಗ್ರಾಮದ ನಿವಾಸಿ, ಬ್ಯಾಂಕ್ ಉದ್ಯೋಗಿ ಸಂತೋಷ ಅಡವಿ (30) ನೀರಿನ ರಭಸಕ್ಕೆ ಸಿಲುಕಿ, ಕೊಚ್ಚಿಕೊಂಡು ಹೋಗಿ ಮೃತರಾಗಿದ್ದಾರೆ. ಮೃತದೇಹ ಪತ್ತೆಯಾಗಿದೆ.</p>.<p>ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ನದಿ–ಹಳ್ಳಗಳು ಉಕ್ಕಿ ಹರಿಯುತ್ತಿವೆ. ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ.ಎರಡು ಸಾವಿರಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ.</p>.<p>ಕಲಬುರ್ಗಿ ನಗರದ ಮುಖ್ಯರಸ್ತೆಯ 60ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳಿಗೆ ನೀರು ನುಗ್ಗಿ ಹಾನಿ ಸಂಭವಿಸಿದೆ.</p>.<p>ಕಾಗಿಣಾ ನದಿ ಪ್ರವಾಹದಿಂದಾಗಿ ಮಳಖೇಡ ಬಳಿಯ ಸೇತುವೆ ಮುಳುಗಿದೆ.ಕಲಬುರ್ಗಿ– ಉದನೂರು, ಮುಧೋಳ– ಕೊತ್ತಪಲ್ಲಿ ರಸ್ತೆಗಳ ಮೇಲೆ ನೀರು ನುಗ್ಗಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಜೇವರ್ಗಿ ಪಟ್ಟಣದ ಮುಖ್ಯರಸ್ತೆ ಕೊಚ್ಚಿಕೊಂಡು ಹೋಗಿದೆ.</p>.<p>ಕಾಳಗಿಯ ಐತಿಹಾಸಿಕ ನೀಲಕಂಠ ಕಾಳೇಶ್ವರ ದೇವಸ್ಥಾನ, ಚಿಂಚೋಳಿ ತಾಲ್ಲೂಕಿನ ರುದ್ನೂರು ಗ್ರಾಮದ ಐತಿಹಾಸಿಕ ತೋಂಟದ ಸಿದ್ಧೇಶ್ವರ ಮಠ, ಮಳಖೇಡ ಸಮೀಪದ ಉತ್ತರಾದಿಮಠ ಜಲಾವೃತವಾಗಿವೆ.</p>.<p>‘ಜಿಲ್ಲೆಯಲ್ಲಿ ಮುಂಗಾರು ಆರಂಭದಿಂದ ಇಲ್ಲಿಯವರೆಗೆ ಶೇ 46ರಷ್ಟು ಹೆಚ್ಚುವರಿ ಮಳೆ ಬಿದ್ದಿದ್ದು, ದಶಕದಲ್ಲೇ ಇದು ದಾಖಲೆ’ ಎಂದು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.</p>.<p>ಯಾದಗಿರಿ ಜಿಲ್ಲೆಯಲ್ಲಿ ಭತ್ತ ಮತ್ತು ಹತ್ತಿ ಬೆಳೆ ನೆಲಕ್ಕಚ್ಚಿದೆ. ಸೈದಾಪುರ ಪಟ್ಟಣಕ್ಕೆ ಸಂರ್ಪಕ ಕಲ್ಪಿಸುವ ಬೆಳಗುಂದಿರಸ್ತೆಬಂದ್ ಆಗಿದೆ.</p>.<p>ರಾಯಚೂರು ಮತ್ತು ಲಿಂಗಸುಗೂರು ತಾಲ್ಲೂಕುಗಳಲ್ಲಿ ಅತಿಹೆಚ್ಚು ಮಳೆ ಸುರಿದಿದೆ. ಯರಮರಸ್ ಸಮೀಪ ಮಳೆ ನೀರಿನ ರಭಸಕ್ಕೆ ಕಾರು ನಿಯಂತ್ರಣ ತಪ್ಪಿ ಮಗುಚಿದ್ದು, ಇಬ್ಬರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.</p>.<p>ಬೀದರ್ ಜಿಲ್ಲೆಯಔರಾದ್ ಹಾಗೂ ಕಮಲನಗರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದೆ.</p>.<div style="text-align:center"><figcaption><strong>ರಾಯಚೂರಿನ ಬಸವನಭಾವಿ ಚೌಕ್ ಸಮೀಪ ರಾಜ್ಯಹೆದ್ದಾರಿಯಲ್ಲಿ ಹರಿಯುತ್ತಿದ್ದ ನೀರಿನ ರಭಸಕ್ಕೆ ಬೈಕ್ ಕೊಚ್ಚಿಹೋಗುವುದನ್ನು ತಡೆಯಲು ಸವಾರ ಹರಸಾಹಸಪಟ್ಟರು.</strong></figcaption></div>.<p class="Subhead"><strong>ಉತ್ತಮ ಮಳೆ:</strong> ಧಾರವಾಡ, ವಿಜಯಪುರ, ಬಳ್ಳಾರಿ, ಬೆಳಗಾವಿ, ಬಾಗಲಕೋಟೆ, ಕಾರವಾರ, ಶಿರಸಿ, ಹಾವೇರಿ ಹಾಗೂ ಗದಗ ಜಿಲ್ಲೆಯಲ್ಲಿ ಮಳೆಯಾಗಿದೆ.</p>.<p>ಬೆಳಗಾವಿ ಜಿಲ್ಲೆಯ ಕೌಜಲಗಿ ಸಮೀಪದ ರಡ್ಡೇರಟ್ಟಿ ಹಳ್ಳದ ಚಿಕ್ಕ ಸೇತುವೆ ಮೇಲೆ 260 ಚೀಲ ಸಕ್ಕರೆ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ. ಲಾರಿ ಚಾಲಕನಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.</p>.<p>ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 8 ಹಾಗೂ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನಲ್ಲಿ 21 ಮನೆಗಳಿಗೆ ಹಾನಿಯುಂಟಾಗಿದೆ.</p>.<p>ಗದಗ ಜಿಲ್ಲೆಯ ಗಜೇಂದ್ರಗಡ ವ್ಯಾಪ್ತಿಯಲ್ಲಿ ಸುರಿದ ಮಳೆಗೆ ಹಲವು ಮನೆಗಳ ಗೋಡೆಗಳು ಕುಸಿದು ಬಿದ್ದಿವೆ. ನರಗುಂದ ತಾಲ್ಲೂಕಿನ ಗುರ್ಲಕಟ್ಟಿ ಗ್ರಾಮದ ಬಳಿಯ ಸೇತುವೆ ಕೊಚ್ಚಿಕೊಂಡು ಹೋಗಿದೆ. ಇದರಿಂದಾಗಿ ಗುರ್ಲಕಟ್ಟಿ ಹಾಗೂ ಕಣಕೀಕೊಪ್ಪದಿಂದ ನರಗುಂದ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಆಗಿದೆ.</p>.<p>ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದಲ್ಲಿಅತಿ ಹೆಚ್ಚು, 10.03 ಸೆಂ.ಮೀ ಮಳೆ ದಾಖಲಾಗಿದೆ. 15 ಮನೆಗಳು ಕುಸಿದಿವೆ. ರಬಕವಿ ಬನಹಟ್ಟಿಯಲ್ಲಿ ಶುಕ್ರವಾರ ಸಂಜೆ ಮತ್ತು ಶನಿವಾರ ಬೆಳಗ್ಗೆ ಸುರಿದ ಭಾರಿ ಮಳೆಗೆ ಸ್ಥಳೀಯ ಪೊಲೀಸ್ ಠಾಣೆಯ ಹಿಂಭಾಗದಲ್ಲಿರುವ ಅಂಜುಮನ್ ಎ ಇಸ್ಲಾಂ ಸರ್ಕಾರಿ ಕನ್ನಡ ಗಂಡು ಮಕ್ಕಳ ಉರ್ದು ಶಾಲೆಯ ಕಟ್ಟಡ ಕುಸಿದುಬಿದ್ದಿದೆ.</p>.<p>ಕೊಡಗು, ಶಿವಮೊಗ್ಗ, ದಾವಣಗೆರೆ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>