ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ

Last Updated 10 ಮೇ 2021, 20:00 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು–ಸಿಡಿಲು ಆರ್ಭಟದೊಂದಿಗೆ ಸೋಮವಾರ ಉತ್ತಮ ಮಳೆ ಆಗಿದೆ.

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ.

ಸಿಡಿಲು ಬಡಿದು ಹಸು, ಎಮ್ಮೆ ಸಾವು: ದಾವಣಗೆರೆ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯಾಗಿದೆ. ವಿಜಯನಗರ ಜಿಲ್ಲೆಯ ಅರಸೀಕೆರೆ ಹೋಬಳಿಯ ಪುಣಭಘಟ್ಟ ಗ್ರಾಮದಲ್ಲಿ ಪ್ರಭು ಅವರಿಗೆ ಸೇರಿದ ಎಮ್ಮೆಗೆ ಸಿಡಿಲು ಬಡಿದು ಮೃತಪಟ್ಟಿದೆ. ಡಗ್ಗಿನ ಬಸಾಪುರ ಗ್ರಾಮದ ಹೊನ್ನಕ್ಕ ಅವರಿಗೆ ಸೇರಿದ ಹಸು ಸಿಡಿಲಿಗೆ ಬಲಿಯಾಗಿದೆ.

ಬಳ್ಳಾರಿಯ ವಿವಿಧೆಡೆ ಉತ್ತಮ ಮಳೆ ಸುರಿಯಿತು. ಕೂಡ್ಲಿಗಿ ತಾಲ್ಲೂಕಿನ ಕಾನಹೊಸಳ್ಳಿ ಸಮೀಪದ ನೆಲಬೊಮ್ಮನಹಳ್ಳಿಯಲ್ಲಿ ಸಿಡಿಲು ಬಡಿದು ಬಾಲರಾಜ್‌ ಅವರ 18 ಮೇಕೆಗಳು ಮೃತಪಟ್ಟಿವೆ.

ಹಾವೇರಿ, ಗದಗ ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಉತ್ತಮ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT