ಸಿಡಿಲು ಬಡಿದು 2 ಎತ್ತು ಸಾವು: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮತ್ತೋಡು ಹೋಬಳಿಯ ಕಪ್ಪನಾಯಕನಹಳ್ಳಿ ಜಮೀನಿನಲ್ಲಿ ಬುಧವಾರ ಬೆಳಿಗ್ಗೆ ಸಿಡಿಲು ಬಡಿದು ರಮೇಶ್ ಅವರಿಗೆ ಸೇರಿದ ಎರಡು ಎತ್ತು ಗಳು ಮೃತಪಟ್ಟಿವೆ. ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿದಿದೆ.