ಬೆಂಗಳೂರು: ಬಯಲುಸೀಮೆಯ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಶನಿವಾರವೂ ಮಳೆಯ ಆರ್ಭಟ ಮುಂದುವರೆದಿದೆ. ದಶಕಗಳ ನಂತರ ಬಹುತೇಕ ಕೆರೆ, ಕುಂಟೆಗಳು ಕೋಡಿ ಬಿದ್ದಿವೆ.ಚಿಕ್ಕಪುಟ್ಟ ನದಿ, ಹಳ್ಳಗಳೂ ಭೋರ್ಗೆರೆಯುತ್ತಿದ್ದು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕಿರು ಜಲಾಶಯಗಳು ಭರ್ತಿ ಆಗಿವೆ.