ನೈರುತ್ಯ ಮುಂಗಾರು ಚುರುಕಾಗಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಮಳೆ ತಗ್ಗಿದ್ದು, ಶಿವಮೊಗ್ಗ, ಮೈಸೂರು, ಮಂಡ್ಯ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಕೆಲವೆಡೆ ಸಾಧಾರಣ ಮಳೆಯಾಗಬಹುದು.