‘ಮರಾಠಿ ಭಾಷೆ, ಸಂಸ್ಕೃತಿ ಉಳಿಸಲು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮರಾಠಿ ನಾಟಕಗಳನ್ನು ಪ್ರದರ್ಶಿಸಲಾಗುವುದು. ಕರ್ನಾಟಕದಲ್ಲಿರುವ ಮರಾಠಿ ಶಿಕ್ಷಣ ಸಂಸ್ಥೆಗಳು, ಗ್ರಂಥಾಲಯಗಳು ಹಾಗೂ ಇತರ ಸಂಘ–ಸಂಸ್ಥೆಗಳಿಗೆ ಮಹಾರಾಷ್ಟ್ರ ಸರ್ಕಾರದಿಂದ ಅನುದಾನ ನೀಡಲಾಗುತ್ತಿದೆ’ ಎಂದು ಹೇಳಿದರು. ಎಂಇಎಸ್ ಕಾರ್ಯಾಧ್ಯಕ್ಷ ಮನೋಹರ ಕಿಣೇಕರ್, ಪ್ರಧಾನ ಕಾರ್ಯದರ್ಶಿ ಮಾಲೋಜಿ ಅಷ್ಟೇಕರ್, ಸುನೀಲ ಅಷ್ಟೇಕರ್, ವಿಕಾಸ ಕಲಘಟಗಿ, ಎಂ.ಜಿ.ಪಾಟೀಲ ಇದ್ದರು.