ಬೆಂಗಳೂರು: ‘ರಾಜ್ಯದಲ್ಲಿ ಮೊದಲು ಪಕ್ಷವನ್ನು ಅಧಿಕಾರಕ್ಕೆತರಬೇಕು. ಆಮೇಲೆ, ಮುಖ್ಯಮಂತ್ರಿ ಯಾರಾಗಬೇಕೆಂ ಬ ಬಗ್ಗೆ ಹೈಕಮಾಂಡ್, ಪಕ್ಷದಶಾಸಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಅವರ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
‘ಮುಂದಿನ ಮುಖ್ಯಮಂತ್ರಿ ಯಾರು?’ ಎಂಬ ಚರ್ಚೆ ಕಾಂಗ್ರೆಸ್ನಲ್ಲಿ ಮುನ್ನೆಲೆಗೆ ಬಂದಿದೆ. ಈ ಬಗ್ಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ಕೆಲವು ನಾಯಕರು ನಮ್ಮ ಮೇಲಿನ ಪ್ರೀತಿಗೆ ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳುತ್ತಾರೆ. ಅದಕ್ಕೆ ನಾನು ಜವಾಬ್ದಾರನಲ್ಲ. ನಾನು ಸಾಮೂಹಿಕ ನಾಯಕತ್ವದಡಿ ನಂಬಿಕೆ ಇಟ್ಟವನು’ ಎಂದರು.