ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಪರವಾಗಿ ನಾನು ಇಲ್ಲಿಗೆ ಭೇಟಿ ನೀಡಿಲ್ಲ. ಮಾನವೀಯ ದೃಷ್ಟಿಯಿಂದ ಬಂದಿದ್ದೇವೆ. ಕುಟುಂಬದವರಿಗೆ ಸಾಂತ್ವನ ಹೇಳಿದ್ದೇನೆ. ಪೋಲಿಸ್ ಇಲಾಖೆ ತನಿಖೆ ನಡೆಸುತ್ತಿದೆ. ರಾಜೀನಾಮೆ ನೀಡುವಂತೆ ಈಶ್ವರಪ್ಪ ಅವರಿಗೆ ಹೈಕಮಾಂಡ್ ಸೂಚಿಸಿರಬಹುದು. ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದರು.