ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಬದಲಾವಣೆ ವಿಚಾರ ಮಾತನಾಡದಂತೆ ಹೈಕಮಾಂಡ್ ಸೂಚನೆ: ಸಚಿವ ವಿ.ಸೋಮಣ್ಣ ಹೇಳಿಕೆ

Last Updated 9 ಜೂನ್ 2021, 7:36 IST
ಅಕ್ಷರ ಗಾತ್ರ

ಚಿತ್ರದುರ್ಗ: ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆಯನ್ನು ಬಿಜೆಪಿ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಮಾತನಾಡದಂತೆ ಸೂಚನೆ ನೀಡಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಭಿನ್ನಮತ ಇಲ್ಲ. ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂಬುದನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರದಲ್ಲಿ ಗೊಂದಲ ಮೂಡಿಸುವುದು ಬೇಡ ಎಂದು ಹೇಳಿದರು.

ಕೊರೊನಾ ಸೋಂಕಿನಿಂದ ರಾಷ್ಟವೇ ಸಂಕಷ್ಟಕ್ಕೆ ಸಿಲುಕಿದೆ. ಕರ್ನಾಟಕ ರಾಜ್ಯ ತತ್ತರಿಸಿದೆ. ಸರ್ಕಾರದ ಕಟ್ಟುನಿಟ್ಟಿನ ಕ್ರಮದಿಂದ ಕೋವಿಡ್ ಹತೋಟಿಗೆ ಬಂದಿದೆ. ಸೋಂಕು ತೊಲಗಿಸಿ ಜನರಲಿ ನೆಮ್ಮದಿ ತರುವುದು ಸರ್ಕಾರದ ಆದ್ಯತೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT