ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂದು ಬಯಸಿ ಜಮೀರ್ ಅಹಮ್ಮದ್ ಪೂಜೆ ಸಲ್ಲಿಸಿರುವ ಕುರಿತು ಪತ್ರಕರ್ತರು ಪ್ರಶ್ನಿಸಿದರು. ಆಗ ಉತ್ತರ ನೀಡಿದ ಹರಿಪ್ರಸಾದ್, ‘ನಮ್ಮ ಪಕ್ಷದಲ್ಲಿ ವೈಯಕ್ತಿಕ ಹೇಳಿಕೆಗಳಿಗೆ ಅವಕಾಶವಿದೆ. ಅದು ಜಮೀರ್ ಅವರ ವೈಯಕ್ತಿಕ ಹೇಳಿಕೆ. ಆದರೆ, ಮುಖ್ಯಮಂತ್ರಿ ಯಾರು ಎನ್ನುವುದನ್ನು ಅವರೇ ನಿರ್ಧರಿಸುವುದಿಲ್ಲ’ ಎಂದರು.