ಬೆಂಗಳೂರು: ಕಾರ್ಮಿಕರ ಪ್ರತಿನಿಧಿಗಳ ಅಭಿಪ್ರಾಯ ಪಡೆಯದೆ ಸರ್ಕಾರ ಹೊರಡಿಸಿರುವ ಕೈಗಾರಿಕಾ ಉದ್ಯೋಗ ನಿಯಮಗಳ ತಿದ್ದುಪಡಿ ಕಾಯ್ದೆಯ ಮಾನ್ಯತೆ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲುಹೈಕೋರ್ಟ್ ಆದೇಶಿಸಿದೆ.
‘ನಿಯಮಗಳಿಗೆ ತಿದ್ದುಪಡಿ ತಂದು ಸರ್ಕಾರ 2020ರ ಜೂನ್ 30ರಂದು ಅಧಿಸೂಚನೆ ಹೊರಡಿಸಿದೆ. ಕೋವಿಡ್ ಸಂದರ್ಭದಲ್ಲಿ ಉದ್ಯಮಿಗಳು ಇದನ್ನು ಬಳಸಿಕೊಂಡು ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡುತ್ತಿದ್ದಾರೆ’ ಎಂದುಕರ್ನಾಟಕ ಕೈಗಾರಿಕೆ ಮತ್ತು ಇತರ ಉದ್ಯಮಗಳ ನೌಕರರ ಒಕ್ಕೂಟ ದೂರಿದೆ.
‘ಕೈಗಾರಿಕಾ ಉದ್ಯೋಗ ಕಾಯ್ದೆ ಪ್ರಕಾರಯಾವುದೇ ನಿಯಮ ರೂಪಿಸುವಾಗ ಅಥವಾ ತಿದ್ದುಪಡಿ ತರುವಾಗ ಕೆಲಸಗಾರರ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಬೇಕು. ನಿಯಮಗಳಿಗೆ ತಿದ್ದುಪಡಿ ತರುವ ಮುನ್ನಈ ಪದ್ಧತಿ ಜಾರಿಯಲ್ಲಿ ಇತ್ತು’ ಎಂದಿದ್ದಾರೆ.