<p><strong>ಬೆಂಗಳೂರು:</strong> ಜಾತಿ ಆಧಾರದಲ್ಲಿ ನಿಗಮ ಮಂಡಳಿಗಳನ್ನು ಸ್ಥಾಪಿಸಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆಯಾಗಿದೆ.</p>.<p>ಮರಾಠಾ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮತ್ತು ಆರ್ಯವೈಶ್ಯ ಅಭಿವೃದ್ಧಿ ನಿಗಮ ಸ್ಥಾಪನೆ ಪ್ರಶ್ನಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>ಪ್ರತಿವಾದಿ ಆಗಿರುವ ಮರಾಠಾ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮತ್ತು ಆರ್ಯವೈಶ್ಯ ಅಭಿವೃದ್ಧಿ ನಿಗಮಕ್ಕೂ ಇದೇ ವೇಳೆ ನೋಟಿಸ್ ಜಾರಿ ಮಾಡಿತು. ‘ಈ ವಿಷಯದಲ್ಲಿ ಸರ್ಕಾರ ಕೈಗೊಳ್ಳುವ ಮುಂದಿನ ಕ್ರಮಗಳು ನ್ಯಾಯಾಲಯ ಹೊರಡಿಸುವ ಅಂತಿಮ ತೀರ್ಪಿಗೆ ಒಳಪಟ್ಟಿದೆ’ ಎಂದು ಸ್ಪಷ್ಟಪಡಿಸಿತು.</p>.<p>‘ಜಾತಿ ಆಧಾರದ ಮೇಲೆ ನಿಗಮ– ಮಂಡಳಿ ಸ್ಥಾಪಿಸುವುದು ಜನರ ಮಧ್ಯ ತಾರತಮ್ಯ ಮೂಡಿಸುತ್ತದೆ. ಒಂದು ನಿರ್ದಿಷ್ಟ ಜಾತಿಗೆ ಲಾಭ ಮಾಡಿಕೊಟ್ಟು, ಉಳಿದ ಜಾತಿಗಳ ಜನರಿಗೆ ಅನ್ಯಾಯ ಮಾಡಿದಂತೆ ಆಗಲಿದೆ. ಈ ಕ್ರಮವು ಸಂವಿಧಾನದ ಪರಿಚ್ಛೇದ 14 ಮತ್ತು 15(1)ಕ್ಕೆ ವಿರುದ್ಧವಾಗಿದೆ. ಈ ನಿಗಮಗಳ ಸ್ಥಾಪನೆ ಸಂವಿಧಾನ ಬಾಹಿರ’ ಎಂದು ಘೋಷಿಸಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜಾತಿ ಆಧಾರದಲ್ಲಿ ನಿಗಮ ಮಂಡಳಿಗಳನ್ನು ಸ್ಥಾಪಿಸಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ಗೆ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆಯಾಗಿದೆ.</p>.<p>ಮರಾಠಾ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮತ್ತು ಆರ್ಯವೈಶ್ಯ ಅಭಿವೃದ್ಧಿ ನಿಗಮ ಸ್ಥಾಪನೆ ಪ್ರಶ್ನಿಸಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>ಪ್ರತಿವಾದಿ ಆಗಿರುವ ಮರಾಠಾ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮತ್ತು ಆರ್ಯವೈಶ್ಯ ಅಭಿವೃದ್ಧಿ ನಿಗಮಕ್ಕೂ ಇದೇ ವೇಳೆ ನೋಟಿಸ್ ಜಾರಿ ಮಾಡಿತು. ‘ಈ ವಿಷಯದಲ್ಲಿ ಸರ್ಕಾರ ಕೈಗೊಳ್ಳುವ ಮುಂದಿನ ಕ್ರಮಗಳು ನ್ಯಾಯಾಲಯ ಹೊರಡಿಸುವ ಅಂತಿಮ ತೀರ್ಪಿಗೆ ಒಳಪಟ್ಟಿದೆ’ ಎಂದು ಸ್ಪಷ್ಟಪಡಿಸಿತು.</p>.<p>‘ಜಾತಿ ಆಧಾರದ ಮೇಲೆ ನಿಗಮ– ಮಂಡಳಿ ಸ್ಥಾಪಿಸುವುದು ಜನರ ಮಧ್ಯ ತಾರತಮ್ಯ ಮೂಡಿಸುತ್ತದೆ. ಒಂದು ನಿರ್ದಿಷ್ಟ ಜಾತಿಗೆ ಲಾಭ ಮಾಡಿಕೊಟ್ಟು, ಉಳಿದ ಜಾತಿಗಳ ಜನರಿಗೆ ಅನ್ಯಾಯ ಮಾಡಿದಂತೆ ಆಗಲಿದೆ. ಈ ಕ್ರಮವು ಸಂವಿಧಾನದ ಪರಿಚ್ಛೇದ 14 ಮತ್ತು 15(1)ಕ್ಕೆ ವಿರುದ್ಧವಾಗಿದೆ. ಈ ನಿಗಮಗಳ ಸ್ಥಾಪನೆ ಸಂವಿಧಾನ ಬಾಹಿರ’ ಎಂದು ಘೋಷಿಸಬೇಕು ಎಂದು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>