‘ರಾಜ್ಯಪಾಲರ ಹುದ್ದೆ, ರೇಷ್ಮೆ ಮಂಡಳಿ ಅಧ್ಯಕ್ಷ ಹುದ್ದೆ, ಕೆಎಸ್ಆರ್ಟಿಸಿ ಅಧ್ಯಕ್ಷ ಹುದ್ದೆ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹುದ್ದೆ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆ ಕೊಡಿಸುವುದಾಗಿ ನಂಬಿಸಿ ಆಕಾಂಕ್ಷಿಗಳಿಂದ ಯುವರಾಜ್ ಕೋಟ್ಯಾಂತರ ರೂಪಾಯಿ ಪಡೆದಿದ್ದಾರೆ ಎಂದು ಆರೋಪವಿದೆ. ಅವರಿಗೆ ಜಾಮೀನು ನೀಡಿದರೆ ಹಣ ಹೊಂದಿದವರು ಸರ್ಕಾರದಲ್ಲಿ ಹುದ್ದೆ ಖರೀದಿಸಬಹುದು ಎಂಬ ತಪ್ಪು ಸಂದೇಶ ಸಮಾಜಕ್ಕೆ ರವಾನೆ ಆಗಿಲಿದೆ. ಆದ್ದರಿಂದ ಯುವರಾಜ್ ಜಾಮೀನು ಪಡೆಯಲು ಅರ್ಹರಲ್ಲ’ ಎಂದು ಪೀಠ ಹೇಳಿತು.