<p><strong>ಬೆಂಗಳೂರು: </strong>ರಾಜ್ಯದಲ್ಲಿ ಲಾಕ್ಡೌನ್ ಮಾನದಂಡಗಳನ್ನು ಜಾರಿಗೊಳಿಸುವಾಗ ತಾಳ್ಮೆಯಿಂದ ವರ್ತಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.</p>.<p>ಕೋವಿಡ್ ವಿಷಯಗಳ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಕಳೆದ ವರ್ಷ ಲಾಕ್ಡೌನ್ ಅವಧಿಯಲ್ಲಿ ಜಾರಿಗೊಳಿಸಿದ ಆದೇಶವನ್ನು ಈ ವರ್ಷವೂ ಅನ್ವಯಿಸುವಂತೆ ತಿಳಿಸಿತು.</p>.<p>ಲಾಕ್ಡೌನ್ ನಿಯಮ ಉಲ್ಲಂಘಿಸಿ ಹೊರ ಹೋಗುವ ಜನರ ವಿರುದ್ಧ ಲಾಠಿ ಬೀಸುತ್ತಿರುವುದನ್ನು ವಕೀಲರು ಉಲ್ಲೇಖಿಸಿದರು. ಸಂಯಮದಿಂದ ವರ್ತಿಸಲು ಸಂಬಂಧಪಟ್ಟವರಿಗೆ ತಿಳಿಸಲಾಗುವುದು ಎಂದು ಅಡ್ವೊಕೇಟ್ ಜನರಲ್ ಭರವಸೆ ನೀಡಿದರು.</p>.<p>ಕಳೆದ ವರ್ಷದ ಲಾಕ್ಡೌನ್ ಸಂದರ್ಭದಲ್ಲಿ ಇದೇ ರೀತಿಯ ದೂರುಗಳು ಬಂದಾಗ 2020ರ ಮಾರ್ಚ್ 30ರಂದು ಹೊರಡಿಸಿದ ಆದೇಶವನ್ನು ಪೀಠ ನೆನಪಿಸಿತು. ‘ಲಾಠಿ ಬಳಸದೆ ನಾಗರಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ನಾಗರಿಕರು ಕೂಡ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಲಾಕ್ಡೌನ್ ಮಾನದಂಡಗಳನ್ನು ಜಾರಿಗೊಳಿಸುವಾಗ ತಾಳ್ಮೆಯಿಂದ ವರ್ತಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.</p>.<p>ಕೋವಿಡ್ ವಿಷಯಗಳ ಕುರಿತ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಕಳೆದ ವರ್ಷ ಲಾಕ್ಡೌನ್ ಅವಧಿಯಲ್ಲಿ ಜಾರಿಗೊಳಿಸಿದ ಆದೇಶವನ್ನು ಈ ವರ್ಷವೂ ಅನ್ವಯಿಸುವಂತೆ ತಿಳಿಸಿತು.</p>.<p>ಲಾಕ್ಡೌನ್ ನಿಯಮ ಉಲ್ಲಂಘಿಸಿ ಹೊರ ಹೋಗುವ ಜನರ ವಿರುದ್ಧ ಲಾಠಿ ಬೀಸುತ್ತಿರುವುದನ್ನು ವಕೀಲರು ಉಲ್ಲೇಖಿಸಿದರು. ಸಂಯಮದಿಂದ ವರ್ತಿಸಲು ಸಂಬಂಧಪಟ್ಟವರಿಗೆ ತಿಳಿಸಲಾಗುವುದು ಎಂದು ಅಡ್ವೊಕೇಟ್ ಜನರಲ್ ಭರವಸೆ ನೀಡಿದರು.</p>.<p>ಕಳೆದ ವರ್ಷದ ಲಾಕ್ಡೌನ್ ಸಂದರ್ಭದಲ್ಲಿ ಇದೇ ರೀತಿಯ ದೂರುಗಳು ಬಂದಾಗ 2020ರ ಮಾರ್ಚ್ 30ರಂದು ಹೊರಡಿಸಿದ ಆದೇಶವನ್ನು ಪೀಠ ನೆನಪಿಸಿತು. ‘ಲಾಠಿ ಬಳಸದೆ ನಾಗರಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ನಾಗರಿಕರು ಕೂಡ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>