ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಭಾಗಶಃ ಪುರಸ್ಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಯ್ದಿರಿ ಸಿದ್ದ ತೀರ್ಪನ್ನು ನ್ಯಾಯಮೂರ್ತಿಗಳು ಬುಧವಾರ ಮುಕ್ತ ಕಲಾಪದಲ್ಲಿ ಪ್ರಕಟಿ ಸಿದರು. ಇದರಿಂದಾಗಿ ಯಡಿಯೂರಪ್ಪ ಮತ್ತು ಅವರ ಕುಟುಂಬದ ಸದಸ್ಯರೂ ಸೇರಿದಂತೆ ಕೆಲ ಅಧಿಕಾರಿಗಳ ವಿರುದ್ಧದ ಭ್ರಷ್ಟಾಚಾರ ತಡೆ ಕಾಯ್ದೆ-1988ರ ಕಲಂ 7,8,9,10 ಮತ್ತು 13, ಭಾರತೀಯ ದಂಡ ಸಂಹಿತೆ-1860ರ ಕಲಂ 383, 384, 415, 418, 420 ಹಾಗೂ ಹಣ ಅಕ್ರಮ ವರ್ಗಾವಣೆ ಕಾಯ್ದೆ-2002ರ ಕಲಂ 3 ಮತ್ತು 4ರ ಅನ್ವಯ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಯಲಿದೆ.