‘ಸರ್ಕಾರಿ ನೌಕರರ ವಿರುದ್ಧದ ಕ್ರಿಮಿನಲ್ ಪ್ರಕರಣ ಖುಲಾಸೆಯಾಗಿದ್ದರೂ, ಸೇವಾ ನಿಯಮಗಳ ಅಡಿಯಲ್ಲಿ ಶಿಸ್ತು ಕ್ರಮಗಳ ಪ್ರಕ್ರಿಯೆ ಆರಂಭಿಸಲು ನಿರ್ಬಂಧವಿಲ್ಲ ಎಂಬ ಸುಪ್ರೀಂ ಕೋರ್ಟ್ ಆದೇಶ ಇದೆ. ಆದ್ದರಿಂದ ನ್ಯಾಯಾಲಯಗಳಿಗೆ ಸಲ್ಲಿಸುವ ಎಲ್ಲಾ ದೋಷಾರೋಪ ಪಟ್ಟಿಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ 2017ರಲ್ಲಿ ಎಸಿಬಿಗೆ ಪತ್ರ ಬರೆಯಲಾಗಿತ್ತು. ಎಸಿಬಿ ಆಗಿನ ಮುಖ್ಯಸ್ಥ ಎಂ.ಎನ್.ರೆಡ್ಡಿ ಅವರು ಸರ್ಕಾರದಿಂದ ಈ ರೀತಿಯ ಯಾವುದೇ ನಿರ್ದೇಶನ ಇಲ್ಲ ಎಂದು ಉತ್ತಿರಿಸಿದ್ದರು.’