ಮಹಾರಾಷ್ಟ್ರ, ಗುಜರಾತ್ ಬಿಟ್ಟರೆ ರಾಜ್ಯದಲ್ಲಿಯೇ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಿವೆ. ಕಳೆದ 20 ವರ್ಷಗಳಲ್ಲಿ 40,346 ರೈತರು ಜೀವ ಕಳೆದುಕೊಂಡಿದ್ದಾರೆ. ಪ್ರಧಾನ್ ಮಂತ್ರಿ ಫಾಸಲ್ ಬೀಮಾ ಯೋಜನೆ (ಪಿಎಂಎಫ್ಬಿವೈ) ಸುಗಮಗೊಳಿಸಬೇಕು ಎಂದು ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ವಿಮಾ ಯೋಜನೆ, ರೈತರಿಗೆ ಬೆಳೆ ವಿಮೆ ನಷ್ಟ ವಿತರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಾದಿಸಿದರು.