<p><strong>ಬೆಂಗಳೂರು:</strong> ಐಎಎಸ್ ಅಧಿಕಾರಿ ಬಿ.ಶರತ್ ಸಲ್ಲಿಸಿರುವ ಅರ್ಜಿ ಸಂಬಂಧ ಕಾಯ್ದಿರಿಸಿರುವ ಆದೇಶವನ್ನು ಕೂಡಲೇ ಹೊರಡಿಸುವಂತೆ ಕೇಂದ್ರ ಆಡಳಿತ ನ್ಯಾಯಮಂಡಳಿಗೆ (ಸಿಎಟಿ) ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಶರತ್ ಅವರನ್ನು 2020 ಸೆಪ್ಟೆಂಬರ್ 28ರಂದು ವರ್ಗಾವಣೆ ಮಾಡಿ ಅವರ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಇದನ್ನು ಪ್ರಶ್ನಿಸಿ ಶರತ್ ಅವರು ಸಿಎಟಿ ಮೊರೆ ಹೋಗಿದ್ದರು.</p>.<p>ವಿಚಾರಣೆ ಪೂರ್ಣಗೊಳಿಸಿರುವ ಪೀಠ, 2020 ಡಿಸೆಂಬರ್ 22ರಂದು ಆದೇಶ ಕಾಯ್ದಿರಿಸಿದೆ. ಸಿಎಟಿ ನಿಯಮಗಳ ಪ್ರಕಾರ ಆದೇಶವನ್ನು ಮೂರು ವಾರಗಳ ತನಕ ಮಾತ್ರ ಕಾಯ್ದಿರಿಸಬಹುದು ಎಂದು ಶರತ್ ವಾದಿಸಿದ್ದಾರೆ.</p>.<p>ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ಅರ್ಜಿ ವಿಲೇವಾರಿ ಮಾಡಿತು. ಹೈಕೋರ್ಟ್ ಆದೇಶದ ಪ್ರತಿ ಸ್ವೀಕರಿಸಿದ ಎರಡು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ಸಿಎಟಿಗೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಐಎಎಸ್ ಅಧಿಕಾರಿ ಬಿ.ಶರತ್ ಸಲ್ಲಿಸಿರುವ ಅರ್ಜಿ ಸಂಬಂಧ ಕಾಯ್ದಿರಿಸಿರುವ ಆದೇಶವನ್ನು ಕೂಡಲೇ ಹೊರಡಿಸುವಂತೆ ಕೇಂದ್ರ ಆಡಳಿತ ನ್ಯಾಯಮಂಡಳಿಗೆ (ಸಿಎಟಿ) ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಶರತ್ ಅವರನ್ನು 2020 ಸೆಪ್ಟೆಂಬರ್ 28ರಂದು ವರ್ಗಾವಣೆ ಮಾಡಿ ಅವರ ಜಾಗಕ್ಕೆ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ನೇಮಕ ಮಾಡಿತ್ತು. ಇದನ್ನು ಪ್ರಶ್ನಿಸಿ ಶರತ್ ಅವರು ಸಿಎಟಿ ಮೊರೆ ಹೋಗಿದ್ದರು.</p>.<p>ವಿಚಾರಣೆ ಪೂರ್ಣಗೊಳಿಸಿರುವ ಪೀಠ, 2020 ಡಿಸೆಂಬರ್ 22ರಂದು ಆದೇಶ ಕಾಯ್ದಿರಿಸಿದೆ. ಸಿಎಟಿ ನಿಯಮಗಳ ಪ್ರಕಾರ ಆದೇಶವನ್ನು ಮೂರು ವಾರಗಳ ತನಕ ಮಾತ್ರ ಕಾಯ್ದಿರಿಸಬಹುದು ಎಂದು ಶರತ್ ವಾದಿಸಿದ್ದಾರೆ.</p>.<p>ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ, ಅರ್ಜಿ ವಿಲೇವಾರಿ ಮಾಡಿತು. ಹೈಕೋರ್ಟ್ ಆದೇಶದ ಪ್ರತಿ ಸ್ವೀಕರಿಸಿದ ಎರಡು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ಸಿಎಟಿಗೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>