<p><strong>ಬೆಂಗಳೂರು</strong>: ‘ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಆಮ್ಲಜನಕ ದುರಂತದಲ್ಲಿ ಮೃತಪಟ್ಟ ಕೋವಿಡ್ ಸೋಂಕಿತರ ಕುಟುಂಬಗಳಿಗೆ ಭಿನ್ನ ಮೊತ್ತದ ಪರಿಹಾರ ನೀಡುವುದನ್ನು ಒಪ್ಪಲಾಗದು’ ಎಂದು ಹೈಕೋರ್ಟ್ ಹೇಳಿದೆ.</p>.<p>2021ರ ಮೇ 2ರ ರಾತ್ರಿ 10.30ರಿಂದ ಮೇ 3ರ ಬೆಳಗಿನ ಜಾವ 2.30 ಗಂಟೆಯ ಅವಧಿಯಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ಮಾತ್ರ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸರ್ಕಾರಕ್ಕೆ ನ್ಯಾಯಾಲಯ ವಿವರಣೆ ಸಲ್ಲಿಸಿದೆ.</p>.<p>‘ಮೇ 3 ರ ಬೆಳಗಿನ ಜಾವ 2.21 ರಿಂದ ಬೆಳಿಗ್ಗೆ 9 ಗಂಟೆಯ ಅವಧಿಯಲ್ಲಿ ಮೃತಪಟ್ಟ 10 ಸೋಂಕಿತರ ಕುಟುಂಬಗಳಿಗೆ ₹2 ಲಕ್ಷ ಪರಿಹಾರವನ್ನಷ್ಟೇ ನೀಡಲು ನಿರ್ಧರಿಸಲಾಗಿದೆ. ಮೇ 2ರಂದು ರಾತ್ರಿ 10.30ಕ್ಕೂ ಮೊದಲು ಮೃತಪಟ್ಟ 11 ಜನರ ಕುಟುಂಬಕ್ಕೂ ಈಗಾಗಲೇ ₹2 ಲಕ್ಷ ಪಾವತಿಸಲಾಗಿದೆ. ನ್ಯಾಯಮೂರ್ತಿ ಬಿ.ಎ. ಪಾಟೀಲ ಅವರ ನಡೆಸುತ್ತಿರುವ ತನಿಖಾ ವರದಿ ಬಂದ ಬಳಿಕ ಆ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ವಿವರಿಸಿದರು.</p>.<p>‘ಆಮ್ಲಜನಕ ಕೊರತೆಯಿಂದಲೇ ಸೋಂಕಿತರು ಮೃತಪಟ್ಟಿದ್ದಾರೆ ಎಂಬುದನ್ನು ಕಾನೂನು ಸೇವೆಗಳ ಪ್ರಾಧಿಕಾರದ ಸಮಿತಿ ಎತ್ತಿ ತೋರಿಸಿದೆ. ಈ ದುರಂತದಲ್ಲಿ ಮೃತಪಟ್ಟ ಕುಟುಂಬಳಿಗೆ ಪರಿಹಾರ ನೀಡುವಲ್ಲಿ ಸರ್ಕಾರ ಭೇದ ಮಾಡದೆ ಎಲ್ಲರನ್ನೂ ಸಮಾನವಾಗಿ ಪರಿಗಣಿಸಬೇಕಾಗುತ್ತದೆ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ಪೀಠ ಹೇಳಿತು.</p>.<p>‘ಮೇ 3ರ ಬೆಳಗಿನ ಜಾವ 2.30ಕ್ಕೆ ಆಮ್ಲಜನಕ ಪೂರೈಕೆ ಆಗಿದ್ದರೂ, ಬಳಿಕ ಮೃತಪಟ್ಟವರ ಆರೋಗ್ಯದ ಮೇಲೆ ಆಮ್ಲಜನಕ ಕೊರತೆ ಪ್ರತಿಕೂಲ ಪರಿಣಾಮ ಬೀರಿರುತ್ತದೆ. ಹಾಗಾಗಿ, ಮೃತಪಟ್ಟವರ ನಡುವೆ ಯಾವುದೇ ವ್ಯತ್ಯಾಸ ಕಂಡು ಹಿಡಿಯಲು ಸಾಧ್ಯವಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಚಾಮರಾಜನಗರ ಜಿಲ್ಲಾ ಆಸ್ಪತ್ರೆಯ ಆಮ್ಲಜನಕ ದುರಂತದಲ್ಲಿ ಮೃತಪಟ್ಟ ಕೋವಿಡ್ ಸೋಂಕಿತರ ಕುಟುಂಬಗಳಿಗೆ ಭಿನ್ನ ಮೊತ್ತದ ಪರಿಹಾರ ನೀಡುವುದನ್ನು ಒಪ್ಪಲಾಗದು’ ಎಂದು ಹೈಕೋರ್ಟ್ ಹೇಳಿದೆ.</p>.<p>2021ರ ಮೇ 2ರ ರಾತ್ರಿ 10.30ರಿಂದ ಮೇ 3ರ ಬೆಳಗಿನ ಜಾವ 2.30 ಗಂಟೆಯ ಅವಧಿಯಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ಮಾತ್ರ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸರ್ಕಾರಕ್ಕೆ ನ್ಯಾಯಾಲಯ ವಿವರಣೆ ಸಲ್ಲಿಸಿದೆ.</p>.<p>‘ಮೇ 3 ರ ಬೆಳಗಿನ ಜಾವ 2.21 ರಿಂದ ಬೆಳಿಗ್ಗೆ 9 ಗಂಟೆಯ ಅವಧಿಯಲ್ಲಿ ಮೃತಪಟ್ಟ 10 ಸೋಂಕಿತರ ಕುಟುಂಬಗಳಿಗೆ ₹2 ಲಕ್ಷ ಪರಿಹಾರವನ್ನಷ್ಟೇ ನೀಡಲು ನಿರ್ಧರಿಸಲಾಗಿದೆ. ಮೇ 2ರಂದು ರಾತ್ರಿ 10.30ಕ್ಕೂ ಮೊದಲು ಮೃತಪಟ್ಟ 11 ಜನರ ಕುಟುಂಬಕ್ಕೂ ಈಗಾಗಲೇ ₹2 ಲಕ್ಷ ಪಾವತಿಸಲಾಗಿದೆ. ನ್ಯಾಯಮೂರ್ತಿ ಬಿ.ಎ. ಪಾಟೀಲ ಅವರ ನಡೆಸುತ್ತಿರುವ ತನಿಖಾ ವರದಿ ಬಂದ ಬಳಿಕ ಆ ಕುಟುಂಬಗಳಿಗೆ ಹೆಚ್ಚುವರಿ ಪರಿಹಾರ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ವಿವರಿಸಿದರು.</p>.<p>‘ಆಮ್ಲಜನಕ ಕೊರತೆಯಿಂದಲೇ ಸೋಂಕಿತರು ಮೃತಪಟ್ಟಿದ್ದಾರೆ ಎಂಬುದನ್ನು ಕಾನೂನು ಸೇವೆಗಳ ಪ್ರಾಧಿಕಾರದ ಸಮಿತಿ ಎತ್ತಿ ತೋರಿಸಿದೆ. ಈ ದುರಂತದಲ್ಲಿ ಮೃತಪಟ್ಟ ಕುಟುಂಬಳಿಗೆ ಪರಿಹಾರ ನೀಡುವಲ್ಲಿ ಸರ್ಕಾರ ಭೇದ ಮಾಡದೆ ಎಲ್ಲರನ್ನೂ ಸಮಾನವಾಗಿ ಪರಿಗಣಿಸಬೇಕಾಗುತ್ತದೆ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ವಿಭಾಗೀಯ ಪೀಠ ಹೇಳಿತು.</p>.<p>‘ಮೇ 3ರ ಬೆಳಗಿನ ಜಾವ 2.30ಕ್ಕೆ ಆಮ್ಲಜನಕ ಪೂರೈಕೆ ಆಗಿದ್ದರೂ, ಬಳಿಕ ಮೃತಪಟ್ಟವರ ಆರೋಗ್ಯದ ಮೇಲೆ ಆಮ್ಲಜನಕ ಕೊರತೆ ಪ್ರತಿಕೂಲ ಪರಿಣಾಮ ಬೀರಿರುತ್ತದೆ. ಹಾಗಾಗಿ, ಮೃತಪಟ್ಟವರ ನಡುವೆ ಯಾವುದೇ ವ್ಯತ್ಯಾಸ ಕಂಡು ಹಿಡಿಯಲು ಸಾಧ್ಯವಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>