‘ನಮ್ಮ ಮೆಟ್ರೊ ಕೆಂಗೇರಿ ಮಾರ್ಗದ ತಪಾಸಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಜತೆ ಇದ್ದ ಸಚಿವರಾದ ಆರ್.ಅಶೋಕ, ಬಸವರಾಜ ಬೊಮ್ಮಾಯಿ ಮತ್ತು ವಿ. ಸೋಮಣ್ಣ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ. ಹೊಸಕೊಟೆಯಲ್ಲಿ ಸಚಿವ ಎಂ.ಟಿ.ಬಿ. ನಾಗರಾಜ್ ಭಾಗವಹಿಸಿದ್ದ ಕಾರ್ಯಕ್ರಮ, ಬೆಳಗಾವಿ ಶಾಸಕ ಅಭಯ ಪಾಟೀಲ ಭಾಗವಹಿಸಿದ್ದ ಮತ್ತೊಂದು ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲೂ ನಿಯಮ ಪಾಲನೆಯಾಗಿಲ್ಲ’ ಎಂದು ವಕೀಲರಾದ ಗೀತಾ ಮಿಶ್ರಾ ಅರ್ಜಿ ಸಲ್ಲಿಸಿದ್ದರು.