ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಹತ್ಯೆ: ಸದ್ಯಕ್ಕೆ ಕ್ರಮ ಇಲ್ಲ

Last Updated 20 ಜನವರಿ 2021, 18:36 IST
ಅಕ್ಷರ ಗಾತ್ರ

ಬೆಂಗಳೂರು: ಗೋಹತ್ಯೆ ನಿಷೇಧ ಸಂಬಂಧ ರೂಪಿಸಲಾಗಿರುವ ನಿಯಮಾವಳಿ ಜಾರಿಗೆ ಬರುವ ತನಕ ಸುಗ್ರೀವಾಜ್ಞೆಯ ಯಾವುದೇ ಸೆಕ್ಷನ್‌ಗಳ ಅಡಿ ಕ್ರಮ ಜರುಗಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಭರವಸೆ ನೀಡಿದೆ.

‘ಸುಗ್ರೀವಾಜ್ಞೆಯಲ್ಲಿನ ಸೆಕ್ಷನ್ 5ರ ಪ್ರಕಾರ ದನಗಳ ಸಾಗಣೆಗೆ ನಿರ್ಬಂಧ ಇದೆ. ಸೆಕ್ಷನ್ 13ರ ಪ್ರಕಾರ ಕೃಷಿಗೆ ಯೋಗ್ಯವಾದ ದನಗಳನ್ನು ಸಾಗಣೆ ಮಾಡುವ ರೈತರನ್ನು ಬಂಧಿಸಲೂ ಅವಕಾಶ ಇದೆ. ಆದರೆ, ಸುಗ್ರೀವಾಜ್ಞೆ ಅಡಿಯಲ್ಲಿ ರೂಪಿಸಲಾಗಿರುವ ನಿಯಮಾವಳಿಗಳು ಇನ್ನೂ ಜಾರಿಗೆ ಬಂದಿಲ್ಲ. ಹೀಗಾಗಿ, ಸುಗ್ರೀವಾಜ್ಞೆ ಅನುಷ್ಠಾನದ ಬಗ್ಗೆ ಸ್ಪಷ್ಟೀಕರಣ ನೀಡಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

‘ಕರಡು ನಿಯಮಾವಳಿಗಳನ್ನು ಜ.16ರಂದು ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಅವುಗಳು ಅಧಿಕೃತವಾಗಿ ಜಾರಿಗೆ ಬರುವ ತನಕ ಸುಗ್ರೀವಾಜ್ಞೆ ಅಡಿಯಲ್ಲಿ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ’ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ಸ್ಪಷ್ಟಪಡಿಸಿದರು.

‘ಅಡ್ವೊಕೇಟ್ ಜನರಲ್ ಸಲ್ಲಿಸಿರುವ ಭರವಸೆಯ ಕಾರಣದಿಂದ ಮಧ್ಯಂತರ ಆದೇಶ ನೀಡಬೇಕು ಎಂಬ ಮನವಿಯನ್ನು ಪರಿಗಣಿಸುವುದಿಲ್ಲ. ಅದರ ಬದಲು ಸುಗ್ರೀವಾಜ್ಞೆಯನ್ನೇ ಪ್ರಶ್ನಿಸಿರುವ ಅರ್ಜಿಗಳ ವಿಚಾರಣೆ ಮುಂದುವರಿಸಲಾಗುವುದು. ಈ ಸಂಬಂಧ ಸರ್ಕಾರ ಫೆಬ್ರುವರಿ 20ರೊಳಗೆ ಆಕ್ಷೇಪಣೆ ಸಲ್ಲಿಸಬೇಕು’ ಎಂದು ತಿಳಿಸಿದ ಪೀಠ, ವಿಚಾರಣೆಯನ್ನು ಫೆ.26ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT