ಆಕ್ಷೇಪವೇನು?:ಕೇಂದ್ರ ಸರ್ಕಾರವು ಬಿಇಎಂಎಲ್ ಸೇರಿದಂತೆ ತನ್ನ ಒಡೆತನದಲ್ಲಿರುವ ಆರು ಸಾರ್ವಜನಿಕ ವಲಯದ ಉದ್ದಿಮೆಗಳನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆ ಕೈಗೆತ್ತಿಕೊಂಡಿದೆ. ’ಮಿನಿರತ್ನ‘ ಎಂದೇ ಪರಿಗಣಿಸಲಾಗಿರುವ ಬೆಮೆಲ್ ಸಂಸ್ಥೆ ರಕ್ಷಣಾ ವಲಯದ ಅತ್ಯಂತ ಪ್ರಮುಖ ಉದ್ದಿಮೆಯಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ಆಸಕ್ತಿ ವ್ಯಕ್ತಪಡಿಸುವಿಕೆಗೂ (ಎಕ್ಸ್ಪ್ರೆಷನ್ ಆಫ್ ಇಂಟ್ರಸ್ಟ್) ಅವಕಾಶ ನೀಡಲಾಗಿದೆ. ಖಾಸಗೀಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುತ್ತಿಲ್ಲ. ಆರ್ಟಿಐನಲ್ಲಿಯೂ ಮಾಹಿತಿ ನೀಡುತ್ತಿಲ್ಲ‘ ಎಂಬುದು ಅರ್ಜಿದಾರರ ಆಕ್ಷೇಪ.