ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಲಾಕ್‌ಡೌನ್‌: ಬಡವರಿಗೆ ಪಡಿತರ ವಿತರಿಸಲು ಹೈಕೋರ್ಟ್ ಸೂಚನೆ

Last Updated 11 ಮೇ 2021, 21:07 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್ ಡೌನ್ ಅವಧಿಯಲ್ಲಿ ಆದಾಯ ಇಲ್ಲದೇ ಇರುವ ಸಮುದಾಯದವರಿಗೆ ಆಹಾರ ವಿತರಿಸುವ ಬಗ್ಗೆ ನಿರ್ಧಾರ ಕೈಗೊಂಡು ಗುರುವಾರ ( ಮೇ 13) ದೊಳಗೆ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ‘ಲಾಕ್‌ಡೌನ್ ಕಾರಣದಿಂದ ಕೆಲ ವರ್ಗದ ಜನರಿಗೆ ಆದಾಯ ಇಲ್ಲವಾಗಿದೆ. ಲಾಕ್‌ಡೌನ್ ಅವಧಿಯಲ್ಲಿ ಅಂತಹ ನಾಗರಿಕರಿಗೆ ಆಹಾರ ಪೂರೈಕೆ ಮಾಡಬೇಕಾಗುತ್ತದೆ. ಹೀಗಾಗಿ ವಿಚಾರಣೆ ನಡೆಸಲಾಗುತ್ತಿದೆ’ ಎಂದು ಹೇಳಿತು.

‘ಆಹಾರ ಭದ್ರತಾ ಕಾರ್ಯವಿಧಾನದ ಭಾಗವಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೂ ಆಹಾರ ಧಾನ್ಯ ವಿತರಿಸುವ ಯೋಜನೆ ರೂಪಿಸಲಾಗಿದೆ. ಈ ಸಂಬಂಧಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಗಾಗಿ ಕಾಯಲಾಗುತ್ತಿದೆ’ ಎಂದು ಸರ್ಕಾರದ ಪರ ವಕೀಲರು ತಿಳಿಸಿದರು.

ಕೂಡಲೇ ನಿರ್ಧಾರ ಕೈಗೊಂಡು ಗುರುವಾರ ವರದಿ ಸಲ್ಲಿಸಬೇಕು ಎಂದು ಪೀಠ ತಿಳಿಸಿತು.

ಬಿಬಿಎಂಪಿ ವ್ಯಾಪ್ತಿ ಹೊರತುಪಡಿಸಿ ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟಿನ್‌ಗಳಲ್ಲಿ ಮೇ 24ರ ತನಕ ಊಟ–ಉಪಾಹಾರವನ್ನು ಉಚಿತವಾಗಿ ನೀಡಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿತು.‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT