<p><strong>ಬೆಂಗಳೂರು</strong>: ಕಚೇರಿಗೆ ಎಲ್ಲಾ ನೌಕರರು ಹಾಜರಾಗುವುದು ಕಡ್ಡಾಯ ಎಂಬ ಸರ್ಕಾರದ ಸುತ್ತೋಲೆಯನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ಅಂಗವಿಕಲರು ಮತ್ತು ಅಂಧರು ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿಸಿದ್ದರೂ ರಾಜ್ಯ ಸರ್ಕಾರ ಅದನ್ನು ಪರಿಗಣಿಸಿಲ್ಲ’ ಎಂದು ಆರೋಪಿಸಿ ಅಂಧರ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.</p>.<p>‘ಅಂಗವಿಕಲರು ವಿಶೇಷವಾಗಿ ಅಂಧರು ಕಚೇರಿಗೆ ಹಾಜರಾಗಿ ಕೆಲಸ ಮಾಡಲು ಕೋವಿಡ್ ಸಂದರ್ಭದಲ್ಲಿ ಸಾಧ್ಯವಿಲ್ಲ. ಕೆಲಸದ ವೇಳೆ ಸಹೊದ್ಯೋಗಿಗಳು ಮತ್ತು ಇತರರಿಂದ ಅಂತರ ಕಾಪಾಡಿಕೊಳ್ಳವುದು ಕಷ್ಟವಾಗಲಿದೆ. ಹೀಗಾಗಿ, ಮೇ 18ರಂದು ಹೊರಡಿಸಿರುವ ಸುತ್ತೋಲೆ ಮರುಪರಿಶೀಲಿಸಬೇಕು’ ಎಂದು ತಿಳಿಸಿತು.</p>.<p>ಈ ಸಂಬಂಧ ಎರಡು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಿದ ಪೀಠ, ಡಿ.11ರೊಳಗೆ ಅನುಸರಣಾ ವರದಿ ಸಲ್ಲಿಸಬೇಕು ಎಂದು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಚೇರಿಗೆ ಎಲ್ಲಾ ನೌಕರರು ಹಾಜರಾಗುವುದು ಕಡ್ಡಾಯ ಎಂಬ ಸರ್ಕಾರದ ಸುತ್ತೋಲೆಯನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ಅಂಗವಿಕಲರು ಮತ್ತು ಅಂಧರು ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿಸಿದ್ದರೂ ರಾಜ್ಯ ಸರ್ಕಾರ ಅದನ್ನು ಪರಿಗಣಿಸಿಲ್ಲ’ ಎಂದು ಆರೋಪಿಸಿ ಅಂಧರ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.</p>.<p>‘ಅಂಗವಿಕಲರು ವಿಶೇಷವಾಗಿ ಅಂಧರು ಕಚೇರಿಗೆ ಹಾಜರಾಗಿ ಕೆಲಸ ಮಾಡಲು ಕೋವಿಡ್ ಸಂದರ್ಭದಲ್ಲಿ ಸಾಧ್ಯವಿಲ್ಲ. ಕೆಲಸದ ವೇಳೆ ಸಹೊದ್ಯೋಗಿಗಳು ಮತ್ತು ಇತರರಿಂದ ಅಂತರ ಕಾಪಾಡಿಕೊಳ್ಳವುದು ಕಷ್ಟವಾಗಲಿದೆ. ಹೀಗಾಗಿ, ಮೇ 18ರಂದು ಹೊರಡಿಸಿರುವ ಸುತ್ತೋಲೆ ಮರುಪರಿಶೀಲಿಸಬೇಕು’ ಎಂದು ತಿಳಿಸಿತು.</p>.<p>ಈ ಸಂಬಂಧ ಎರಡು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಿದ ಪೀಠ, ಡಿ.11ರೊಳಗೆ ಅನುಸರಣಾ ವರದಿ ಸಲ್ಲಿಸಬೇಕು ಎಂದು ಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>