ಸಿಬ್ಬಂದಿಗೆ ಕಾಲಕಾಲಕ್ಕೆ ತರಬೇತಿ: ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ರೋಗಗಳ ನಿಯಂತ್ರಣ ಕಾಯ್ದೆಯಡಿ ರೂಪಿಸಿರುವ ನಿಬಂಧನೆಗಳನ್ನು ಕಾರ್ಯಗತಗೊಳಿಸಲು ನೇಮಕಗೊಂಡಿರುವ ಸಿಬ್ಬಂದಿಗೆ ಕಾಲಕಾಲಕ್ಕೆ ತರಬೇತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಮಾಜಿ ಶಾಸಕ ಡಾ. ಸಾರ್ವಭೌಮ ಎಸ್. ಬಗಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಆಧರಿಸಿ ಅರ್ಜಿಯನ್ನು ಪೀಠ ವಿಲೇವಾರಿ ಮಾಡಿತು.
‘ವಿಜಯಪುರ, ಕಲಬುರ್ಗಿ, ಬೀದರ್ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಈ ರೀತಿಯ ರೋಗಗಳಿಗೆ ಚಿಕಿತ್ಸೆ ನೀಡುವ ಕೇಂದ್ರಗಳು ಹೆಚ್ಚಾಗಿ ತಲೆ ಎತ್ತುತ್ತಿವೆ. ಪಕ್ಕದ ಮಹಾರಾಷ್ಟ್ರ ರಾಜ್ಯದ ಜನರು ಇಲ್ಲಿಗೆ ಹೆಚ್ಚಾಗಿ ಭೇಟಿ ನೀಡುತ್ತಿದ್ದಾರೆ. ಯಾವುದೇ ಕಾನೂನುಗಳೂ ಇಲ್ಲಿ ಪಾಲನೆಯಾಗುತ್ತಿಲ್ಲ’ ಎಂದು ಅರ್ಜಿದಾರರು ದೂರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.