ಇದಕ್ಕೆ ಕೆರಳಿದ ನ್ಯಾಯಪೀಠ, ‘ಸ್ಮಶಾನವಿಲ್ಲದ ಕಡೆ ಜಮೀನು ಒದಗಿಸುವಂತೆ ಹೈಕೋರ್ಟ್ ಆದೇಶ ನೀಡಿ ಮೂರೂವರೆ ವರ್ಷ ಕಳೆದಿದ್ದರೂ, ಸ್ಮಶಾನಕ್ಕೆ ಜಾಗ ಒದಗಿಸಲು ಈಗಲೂ ಸರ್ಕಾರ ಒದ್ದಾಡುತ್ತಿದೆ. ಜಿಲ್ಲಾಧಿಕಾರಿಗಳು ಸುಳ್ಳು ಮಾಹಿತಿ ಒದಗಿಸಿ ನ್ಯಾಯಾಲಯ, ಅರ್ಜಿದಾರರು ಮತ್ತು ಸಾರ್ವಜನಿಕರಿಗೆ ವಂಚಿಸುತ್ತಿದ್ದಾರೆ. ಇದು ತ್ರೀ ಇನ್ ಒನ್ ಮೋಸ’ ಎಂದು ಕಿಡಿ ಕಾರಿತು. ‘ಇಂತಹ ಅಧಿಕಾರಿಗಳು ಹೈಕೋರ್ಟ್ ಆದೇಶಕ್ಕೆ ಅಗೌರವ ತೋರುತ್ತಿದ್ದಾರೆ. ಹೀಗಾಗಿ, ಆರೋಪಿಗಳಾದ ಸರ್ಕಾರಿ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ದೋಷಾರೋಪ ಹೊರಿಸುವುದನ್ನು ಬಿಟ್ಟು ನಮಗೆ ಅನ್ಯ ಮಾರ್ಗವಿಲ್ಲ’ ಎಂದು ನುಡಿಯಿತು.