ವಿಶ್ವ ದರ್ಜೆಯ ಗಾಲ್ಫ್ ರೆಸಾರ್ಟ್ ನಿರ್ಮಾಣಕ್ಕೆ ಚಾಮುಂಡೇಶ್ವರಿ ಬಿಲ್ಡ್ ಟೆಕ್ ಕಂಪನಿ ರಾಮನಗರದ ಬಿಡದಿ ಬಳಿ 1996ರಲ್ಲಿ 400 ಎಕರೆ ಜಮೀನು ಖರೀದಿಸಿತ್ತು. ಸುತ್ತಮುತ್ತಲಿನ 77 ಎಕರೆ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿತ್ತು. ಒತ್ತುವರಿ ಮಾಡಿಕೊಂಡಿರುವ ಜಮೀನಿಗೆ ₹982 ಕೋಟಿ ನಿಗದಿ ಮಾಡಿ ರಾಮನಗರ ಜಿಲ್ಲಾಧಿಕಾರಿ 2017ರಲ್ಲಿ ನೋಟಿಸ್ ನೀಡಿದ್ದರು. ಇದನ್ನು ಪ್ರಶ್ನಿಸಿ ಕಂಪನಿ ಹೈಕೋರ್ಟ್ಗೆ ತಕರಾರು ಅರ್ಜಿ ಸಲ್ಲಿಸಿತ್ತು.