<p><strong>ಬೆಂಗಳೂರು</strong>: ಹೊನ್ನಾವರ ಬಂದರು ವಿಸ್ತರಣೆ ಯೋಜನೆಯ ಯಾವುದೇ ಭಾಗ ಆಮೆಗಳ ಆವಾಸ ತಾಣದೊಳಗೆ ಇದೆಯೇ ಎಂಬುದನ್ನು ಗುರುತಿಸಲು ಚೆನ್ನೈನ ನ್ಯಾಷನಲ್ ಸೆಂಟರ್ ಫಾರ್ ಸಸ್ಟೈನಬಲ್ ಕೋಸ್ಟಲ್ ಮ್ಯಾನೇಜ್ಮೆಂಟ್ (ಎನ್ಸಿಎಸ್ಸಿಎಂ) ಮೂಲಕ ಸಮೀಕ್ಷೆ ಮಾಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಟೊಂಕ ಬಳಿ ಬಂದರು ವಿಸ್ತರಣೆ ಯೋಜನೆಯನ್ನು ಹೊನ್ನಾವರ ಪೋರ್ಟ್ ಕಂಪನಿ ಕೈಗೊತ್ತಿಕೊಂಡಿದೆ.</p>.<p>ಹೊನ್ನಾವರ ತಾಲ್ಲೂಕಿನ ಹಸಿಮೀನು ವ್ಯಾಪಾರಿಗಳ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>ಯೋಜನೆ ಕಾರ್ಯರೂಪಕ್ಕೆ ಬಂದರೆ ಆಮೆಗಳ ಆವಾಸ ಸ್ಥಾನದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.</p>.<p>‘ಆಮೆಗಳ ಆವಾಸ ಸ್ಥಾನ ಎಂಬುದು ಗಂಭೀರ ವಿಷಯ. ಹೀಗಾಗಿ, ಯೋಜನೆ ವಿಸ್ತರಣೆಯಾಗಲಿರುವ 45 ಹೆಕ್ಟೇರ್ ಜಾಗದ ಯಾವುದೇ ಭಾಗ ಆಮೆಗಳ ವಾಸಸ್ಥಾನವೇ ಎಂಬುದನ್ನು ಗುರುತಿಸಬೇಕಾಗುತ್ತದೆ. ಎನ್ಸಿಎಸ್ಸಿಎಂ ಮೂಲಕ ಈ ಸಮೀಕ್ಷೆ ಮಾಡಿಸಬೇಕು’ ಎಂದು ಪೀಠ ತಿಳಿಸಿತು.</p>.<p>ಅರ್ಜಿಯಲ್ಲಿನ ಇತರ ಅಹವಾಲುಗಳ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಪೀಠ ಸೂಚನೆ ನೀಡಿತು.</p>.<p>ಈ ನಡುವೆ 0.8 ಹೆಕ್ಟೇರ್ ಅರಣ್ಯ ಭೂಮಿಗೆ ಸಂಬಂಧಿಸಿದಂತೆ ನೀಡಿರುವ ಮಧ್ಯಂತರ ಆದೇಶವು ಮುಂದುವರಿಯಲಿದೆ. ಈ ವಿಷಯದಲ್ಲಿ ಕೈಗೊಂಡ ಯಾವುದೇ ಕ್ರಮವೂ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಹೊನ್ನಾವರ ಬಂದರು ವಿಸ್ತರಣೆ ಯೋಜನೆಯ ಯಾವುದೇ ಭಾಗ ಆಮೆಗಳ ಆವಾಸ ತಾಣದೊಳಗೆ ಇದೆಯೇ ಎಂಬುದನ್ನು ಗುರುತಿಸಲು ಚೆನ್ನೈನ ನ್ಯಾಷನಲ್ ಸೆಂಟರ್ ಫಾರ್ ಸಸ್ಟೈನಬಲ್ ಕೋಸ್ಟಲ್ ಮ್ಯಾನೇಜ್ಮೆಂಟ್ (ಎನ್ಸಿಎಸ್ಸಿಎಂ) ಮೂಲಕ ಸಮೀಕ್ಷೆ ಮಾಡಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಟೊಂಕ ಬಳಿ ಬಂದರು ವಿಸ್ತರಣೆ ಯೋಜನೆಯನ್ನು ಹೊನ್ನಾವರ ಪೋರ್ಟ್ ಕಂಪನಿ ಕೈಗೊತ್ತಿಕೊಂಡಿದೆ.</p>.<p>ಹೊನ್ನಾವರ ತಾಲ್ಲೂಕಿನ ಹಸಿಮೀನು ವ್ಯಾಪಾರಿಗಳ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>ಯೋಜನೆ ಕಾರ್ಯರೂಪಕ್ಕೆ ಬಂದರೆ ಆಮೆಗಳ ಆವಾಸ ಸ್ಥಾನದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.</p>.<p>‘ಆಮೆಗಳ ಆವಾಸ ಸ್ಥಾನ ಎಂಬುದು ಗಂಭೀರ ವಿಷಯ. ಹೀಗಾಗಿ, ಯೋಜನೆ ವಿಸ್ತರಣೆಯಾಗಲಿರುವ 45 ಹೆಕ್ಟೇರ್ ಜಾಗದ ಯಾವುದೇ ಭಾಗ ಆಮೆಗಳ ವಾಸಸ್ಥಾನವೇ ಎಂಬುದನ್ನು ಗುರುತಿಸಬೇಕಾಗುತ್ತದೆ. ಎನ್ಸಿಎಸ್ಸಿಎಂ ಮೂಲಕ ಈ ಸಮೀಕ್ಷೆ ಮಾಡಿಸಬೇಕು’ ಎಂದು ಪೀಠ ತಿಳಿಸಿತು.</p>.<p>ಅರ್ಜಿಯಲ್ಲಿನ ಇತರ ಅಹವಾಲುಗಳ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಪೀಠ ಸೂಚನೆ ನೀಡಿತು.</p>.<p>ಈ ನಡುವೆ 0.8 ಹೆಕ್ಟೇರ್ ಅರಣ್ಯ ಭೂಮಿಗೆ ಸಂಬಂಧಿಸಿದಂತೆ ನೀಡಿರುವ ಮಧ್ಯಂತರ ಆದೇಶವು ಮುಂದುವರಿಯಲಿದೆ. ಈ ವಿಷಯದಲ್ಲಿ ಕೈಗೊಂಡ ಯಾವುದೇ ಕ್ರಮವೂ ನ್ಯಾಯಾಲಯದ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>