<p><strong>ಬೆಂಗಳೂರು: </strong>ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸರ್ಕಾರ ಮಂಜೂರು ಮಾಡಿರುವ ಜಮೀನಿನ ಪಟ್ಟಿಯನ್ನು ಎಲ್ಲಾ ನೋಂದಣಿ ಕಚೇರಿಗಳಿಗೆ ನಾಲ್ಕು ತಿಂಗಳಲ್ಲಿ ಒದಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂಪರಭಾರೆ ಕಾಯ್ದೆಯ(ಪಿಟಿಸಿಎಲ್) ಸೆಕ್ಷನ್ 6 ಅನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದಿದ್ದರೆ ಕಾಯ್ದೆಯೇ ಉದ್ದೇಶವನ್ನೇ ಸೋಲಿಸಿದಂತೆ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.</p>.<p>ಕಂದಾಯ ಇಲಾಖೆಯ ಭೂಮಿ ತಂತ್ರಾಂಶದದಲ್ಲಿ ರಾಜ್ಯದ ಕೃಷಿ ಭೂಮಿಯ ಸಂಪೂರ್ಣ ವಿವರ ಇದೆ. ಈ ತಂತ್ರಾಂಶವನ್ನು ಅವಲಂಬಿಸಿಯೇ ಕಾವೇರಿ ತಂತ್ರಾಂಶದ ಮೂಲಕ ನೋಂದಣಿ ಕಾರ್ಯ ನಡೆಸಲಾಗುತ್ತಿದೆ. ಭೂಮಿ ಮತ್ತು ಕಾವೇರಿ ತಂತ್ರಾಂಶಗಳು ವಿಲೀನಗೊಂಡ ಬಳಿಕ ಎಲ್ಲಾ ಮಾಹಿತಿಯೂ ನೋಂದಣಿ ಇಲಾಖೆಗೆ ಲಭ್ಯವಾಗಲಿದೆ ಎಂದು ಸರ್ಕಾರ ವಿವರ ಸಲ್ಲಿಸಿತು.</p>.<p>‘ಪಿಟಿಸಿಎಲ್ ಕಾಯ್ದೆಯ ಸೆಕ್ಷನ್ 6ರ ಪ್ರಕಾರ ಈ ಪಟ್ಟಿಯನ್ನು ಎಲ್ಲಾ ನೋಂದಣಾಧಿಕಾರಿ ಕಚೇರಿಗಳಿಗೆ ಒದಗಿಸುವುದು ಕಡ್ಡಾಯ. ಬೇರೆ ಸ್ಪಷ್ಟನೆ ನೀಡದೆ ಆ ಕೆಲಸವನ್ನು ಸರ್ಕಾರ ಮೊದಲು ಮಾಡಬೇಕು. ಡಿಸೆಂಬರ್ 16ರೊಳಗೆ ಅನುಸರಣಾ ವರದಿ ಸಲ್ಲಿಸಬೇಕು’ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಸರ್ಕಾರ ಮಂಜೂರು ಮಾಡಿರುವ ಜಮೀನಿನ ಪಟ್ಟಿಯನ್ನು ಎಲ್ಲಾ ನೋಂದಣಿ ಕಚೇರಿಗಳಿಗೆ ನಾಲ್ಕು ತಿಂಗಳಲ್ಲಿ ಒದಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂಪರಭಾರೆ ಕಾಯ್ದೆಯ(ಪಿಟಿಸಿಎಲ್) ಸೆಕ್ಷನ್ 6 ಅನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದಿದ್ದರೆ ಕಾಯ್ದೆಯೇ ಉದ್ದೇಶವನ್ನೇ ಸೋಲಿಸಿದಂತೆ’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿತು.</p>.<p>ಕಂದಾಯ ಇಲಾಖೆಯ ಭೂಮಿ ತಂತ್ರಾಂಶದದಲ್ಲಿ ರಾಜ್ಯದ ಕೃಷಿ ಭೂಮಿಯ ಸಂಪೂರ್ಣ ವಿವರ ಇದೆ. ಈ ತಂತ್ರಾಂಶವನ್ನು ಅವಲಂಬಿಸಿಯೇ ಕಾವೇರಿ ತಂತ್ರಾಂಶದ ಮೂಲಕ ನೋಂದಣಿ ಕಾರ್ಯ ನಡೆಸಲಾಗುತ್ತಿದೆ. ಭೂಮಿ ಮತ್ತು ಕಾವೇರಿ ತಂತ್ರಾಂಶಗಳು ವಿಲೀನಗೊಂಡ ಬಳಿಕ ಎಲ್ಲಾ ಮಾಹಿತಿಯೂ ನೋಂದಣಿ ಇಲಾಖೆಗೆ ಲಭ್ಯವಾಗಲಿದೆ ಎಂದು ಸರ್ಕಾರ ವಿವರ ಸಲ್ಲಿಸಿತು.</p>.<p>‘ಪಿಟಿಸಿಎಲ್ ಕಾಯ್ದೆಯ ಸೆಕ್ಷನ್ 6ರ ಪ್ರಕಾರ ಈ ಪಟ್ಟಿಯನ್ನು ಎಲ್ಲಾ ನೋಂದಣಾಧಿಕಾರಿ ಕಚೇರಿಗಳಿಗೆ ಒದಗಿಸುವುದು ಕಡ್ಡಾಯ. ಬೇರೆ ಸ್ಪಷ್ಟನೆ ನೀಡದೆ ಆ ಕೆಲಸವನ್ನು ಸರ್ಕಾರ ಮೊದಲು ಮಾಡಬೇಕು. ಡಿಸೆಂಬರ್ 16ರೊಳಗೆ ಅನುಸರಣಾ ವರದಿ ಸಲ್ಲಿಸಬೇಕು’ ಎಂದು ಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>