<p><strong>ಬೆಂಗಳೂರು</strong>: ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ಅಂತಿಮ ವರದಿ ಸಲ್ಲಿಸಲು ಷರತ್ತುಬದ್ಧ ಅನುಮತಿ ನೀಡಬೇಕು ಎಂಬ ಕೋರಿಕೆ ಪರಿಗಣಿಸಲಾಗುವುದು ಹೈಕೋರ್ಟ್ ಶುಕ್ರವಾರ ಹೇಳಿದೆ.</p>.<p>‘ವಿಶೇಷ ತನಿಖಾ ತಂಡ(ಎಸ್ಐಟಿ) ಈಗಾಗಲೇ ತನಿಖೆ ಪೂರ್ಣಗೊಳಿಸಿದ್ದು, ಸಂಬಂಧಿಸಿದ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಅನುಮತಿ ನೀಡಬೇಕು’ ಎಂದು ಅಡ್ವೋಕೇಟ್ ಜನರಲ್(ಎ.ಜಿ) ಪ್ರಭುಲಿಂಗ ಕೆ. ನಾವಡಗಿ ಕೋರಿದರು. ನ್ಯಾಯಾಲಯದ ಅನುಮತಿ ಇಲ್ಲದೆ ವರದಿ ಸಲ್ಲಿಸಬಾರದು ಎಂದು ಈ ಹಿಂದಿನ ಆದೇಶದಲ್ಲಿ ಪೀಠ ತಿಳಿಸಿತ್ತು.</p>.<p>ಸಂತ್ರಸ್ತೆ ಪರ ಹಾಜರಾಗಿದ್ದ ವಕೀಲೆ ಇಂದಿರಾ ಜೈಸಿಂಗ್ ಅವರು ಎ.ಜಿ ಮನವಿಗೆ ಆಕ್ಷೇಪ ವ್ಯಕ್ತಪಡಿಸಿದರು. ‘ಎಸ್ಐಟಿ ರಚನೆಯ ಸಿಂಧುತ್ವವನ್ನೇ ಸಂತ್ರಸ್ತೆ ಪ್ರಶ್ನಿಸಿದ್ದಾರೆ. ರಮೇಶ ಜಾರಕಿಹೊಳಿ ಮನವಿ ಮತ್ತು ಗೃಹ ಸಚಿವರ ಪತ್ರ ಆಧರಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಅವರು ಎಸ್ಐಟಿ ರಚಿಸಿ ಆದೇಶಿಸಿದ್ದಾರೆ. ಸಿಆರ್ಪಿಸಿಯಲ್ಲಿ ಇದಕ್ಕೆ ಅವಕಾಶ ಇಲ್ಲ’ ಎಂದು ವಾದಿಸಿದರು.</p>.<p>ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ, ‘ಎ.ಜಿ ಸಲ್ಲಿಸಿರುವ ಕೋರಿಕೆಯನ್ನು ಪರಿಗಣಿಸಲಾಗುವುದು’ ಎಂದು ತಿಳಿಸಿತು. ವಿಚಾರಣೆಯನ್ನು ಸೆ.27ಕ್ಕೆ ಮುಂದೂಡಿತು.</p>.<p>2021ರ ಮಾರ್ಚ್ 10ರಂದು ಗೃಹ ಸಚಿವರು ಬರೆದಿದ್ದ ಪತ್ರ ಆಧರಿಸಿ 11ರಂದು ಎಸ್ಐಟಿ ರಚಿಸಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದರು. ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆಯಿಂದ ನಡೆಸಬೇಕು. ಎಸ್ಐಟಿ ನ್ಯಾಯಸಮ್ಮತ ತನಿಖೆ ನಡೆಸಿಲ್ಲ ಎಂಬುದು ಸಂತ್ರಸ್ತೆಯ ಆಕ್ಷೇಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಶಾಸಕ ರಮೇಶ ಜಾರಕಿಹೊಳಿ ಸಿಡಿ ಪ್ರಕರಣದ ಅಂತಿಮ ವರದಿ ಸಲ್ಲಿಸಲು ಷರತ್ತುಬದ್ಧ ಅನುಮತಿ ನೀಡಬೇಕು ಎಂಬ ಕೋರಿಕೆ ಪರಿಗಣಿಸಲಾಗುವುದು ಹೈಕೋರ್ಟ್ ಶುಕ್ರವಾರ ಹೇಳಿದೆ.</p>.<p>‘ವಿಶೇಷ ತನಿಖಾ ತಂಡ(ಎಸ್ಐಟಿ) ಈಗಾಗಲೇ ತನಿಖೆ ಪೂರ್ಣಗೊಳಿಸಿದ್ದು, ಸಂಬಂಧಿಸಿದ ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಅನುಮತಿ ನೀಡಬೇಕು’ ಎಂದು ಅಡ್ವೋಕೇಟ್ ಜನರಲ್(ಎ.ಜಿ) ಪ್ರಭುಲಿಂಗ ಕೆ. ನಾವಡಗಿ ಕೋರಿದರು. ನ್ಯಾಯಾಲಯದ ಅನುಮತಿ ಇಲ್ಲದೆ ವರದಿ ಸಲ್ಲಿಸಬಾರದು ಎಂದು ಈ ಹಿಂದಿನ ಆದೇಶದಲ್ಲಿ ಪೀಠ ತಿಳಿಸಿತ್ತು.</p>.<p>ಸಂತ್ರಸ್ತೆ ಪರ ಹಾಜರಾಗಿದ್ದ ವಕೀಲೆ ಇಂದಿರಾ ಜೈಸಿಂಗ್ ಅವರು ಎ.ಜಿ ಮನವಿಗೆ ಆಕ್ಷೇಪ ವ್ಯಕ್ತಪಡಿಸಿದರು. ‘ಎಸ್ಐಟಿ ರಚನೆಯ ಸಿಂಧುತ್ವವನ್ನೇ ಸಂತ್ರಸ್ತೆ ಪ್ರಶ್ನಿಸಿದ್ದಾರೆ. ರಮೇಶ ಜಾರಕಿಹೊಳಿ ಮನವಿ ಮತ್ತು ಗೃಹ ಸಚಿವರ ಪತ್ರ ಆಧರಿಸಿ ಬೆಂಗಳೂರು ಪೊಲೀಸ್ ಕಮಿಷನರ್ ಅವರು ಎಸ್ಐಟಿ ರಚಿಸಿ ಆದೇಶಿಸಿದ್ದಾರೆ. ಸಿಆರ್ಪಿಸಿಯಲ್ಲಿ ಇದಕ್ಕೆ ಅವಕಾಶ ಇಲ್ಲ’ ಎಂದು ವಾದಿಸಿದರು.</p>.<p>ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠ, ‘ಎ.ಜಿ ಸಲ್ಲಿಸಿರುವ ಕೋರಿಕೆಯನ್ನು ಪರಿಗಣಿಸಲಾಗುವುದು’ ಎಂದು ತಿಳಿಸಿತು. ವಿಚಾರಣೆಯನ್ನು ಸೆ.27ಕ್ಕೆ ಮುಂದೂಡಿತು.</p>.<p>2021ರ ಮಾರ್ಚ್ 10ರಂದು ಗೃಹ ಸಚಿವರು ಬರೆದಿದ್ದ ಪತ್ರ ಆಧರಿಸಿ 11ರಂದು ಎಸ್ಐಟಿ ರಚಿಸಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದರು. ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆಯಿಂದ ನಡೆಸಬೇಕು. ಎಸ್ಐಟಿ ನ್ಯಾಯಸಮ್ಮತ ತನಿಖೆ ನಡೆಸಿಲ್ಲ ಎಂಬುದು ಸಂತ್ರಸ್ತೆಯ ಆಕ್ಷೇಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>