ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಂದಾಲ್‌ಗೆ ಜಮೀನು: ಯಥಾಸ್ಥಿತಿಯ ಭರವಸೆ

Last Updated 19 ಜುಲೈ 2021, 17:47 IST
ಅಕ್ಷರ ಗಾತ್ರ

ಬೆಂಗಳೂರು: ಬಳ್ಳಾರಿ ಜಿಲ್ಲೆಯಲ್ಲಿ 3,667 ಎಕರೆ ಜಮೀನನ್ನು ಜೆಎಸ್‌ಡಬ್ಲ್ಯು ಕಂಪನಿಗೆ ಮಾರಾಟ ಮಾಡುವ ಮಾಡಿಕೊಂಡಿರುವ ಕ್ರಯಪತ್ರದ ವಿಷಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುವುದು ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಭರವಸೆ ನೀಡಿದೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬರೆದಿರುವ ಮೆಮೊ ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಆಕ್ಷೇಪಣಾ ಹೇಳಿಕೆಯನ್ನು ಸರ್ಕಾರ ಶೀಘ್ರವೇ ಸಲ್ಲಿಸಬೇಕು’ ಎಂದು ತಿಳಿಸಿತು.

ಸಂಪುಟದ ಹಲವು ಸಚಿವರ ವಿರೋಧ ಇದ್ದರೂ ಕಡಿಮೆ ದರದಲ್ಲಿ ಸರ್ಕಾರದ ಜಾಗವನ್ನು ಜೆಎಸ್‌ಡಬ್ಲ್ಯು ಕಂಪನಿಗೆ ಮಾರಾಟ ಮಾಡಲು ಸರ್ಕಾರ ಹೊರಟಿದೆ ಎಂದು ಕೆ.ಎ. ಪಾಲ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT