<p><strong>ಬೆಂಗಳೂರು:</strong> ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿ ಸೇವೆಯಲ್ಲಿರುವ ಮತ್ತು ನಿವೃತ್ತ ಸರ್ಕಾರಿ ನೌಕರರಿಗೆ ಕರ್ನಾಟಕ ಗೃಹ ಮಂಡಳಿಯ (ಕೆಎಚ್ಬಿ) 10 ವಸತಿ ಗೃಹಗಳನ್ನು ಮಾರಾಟ ಮಾಡಿದ್ದ ಪ್ರಕ್ರಿಯೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘಿಸಿದ ಕೆಎಚ್ಬಿಗೆ ₹1 ಲಕ್ಷ ದಂಡ ವಿಧಿಸಿದೆ.</p>.<p>ಕೆ.ಎ.ಚಂದ್ರಶೇಖರ್ ಮತ್ತು ಇತರ ಮೂವರು ಸ್ಥಳೀಯರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ‘ವರ್ಗಾವಣೆಗೊಂಡ 10 ನೌಕರರು ಮನೆ ಖಾಲಿ ಮಾಡಬೇಕಾದ ಸಂದರ್ಭದಲ್ಲಿ ಅವರಿಗೇ ಕೆಎಚ್ಬಿ ಮಾರಾಟ ಮಾಡಿದೆ. ಇದು ಮಂಡಳಿಯ ನಿಯಮಗಳ ಉಲ್ಲಂಘನೆ ಮತ್ತು ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ’ ಎಂದು ಆರೋಪಿಸಿದ್ದರು.</p>.<p>‘ಈ ರೀತಿಯ ಅಭ್ಯಾಸಕ್ಕೆ ಒಮ್ಮೆ ಅನುಮತಿ ನೀಡಿದರೆ ಸರ್ಕಾರದ ಮನೆ ಮತ್ತು ಆಸ್ತಿಗಳನ್ನು ಹಾಲಿ ಮತ್ತು ನಿವೃತ್ತ ನೌಕರರಿಗೆ ಕೆಎಚ್ಬಿ ಮಾರಾಟ ಮಾಡಿಬಿಡುತ್ತದೆ’ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಹೇಳಿತು.</p>.<p>‘ಕಾರ್ಯವಿಧಾನಗಳನ್ನು ಅನುಸರಿಸದೆ ಕೆಎಚ್ಬಿ ತನ್ನ ಆಸ್ತಿಯನ್ನು ಯಾವುದೇ ವ್ಯಕ್ತಿಗೆ ಮಾರಾಟ ಅಥವಾ ಗುತ್ತಿಗೆ ಆಧಾರದಲ್ಲಿ ನೀಡಬಾರದು. ವಸತಿ ಗೃಹ ಖರೀದಿ ಮಾಡಿದ್ದ 10 ಜನರಿಗೆ ಶೇ 12.5ರ ಬಡ್ಡಿ ದರದಲ್ಲಿ ಮೊತ್ತ ಮರು ಪಾವತಿ ಮಾಡಬೇಕು’ ಎಂದು ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನಲ್ಲಿ ಸೇವೆಯಲ್ಲಿರುವ ಮತ್ತು ನಿವೃತ್ತ ಸರ್ಕಾರಿ ನೌಕರರಿಗೆ ಕರ್ನಾಟಕ ಗೃಹ ಮಂಡಳಿಯ (ಕೆಎಚ್ಬಿ) 10 ವಸತಿ ಗೃಹಗಳನ್ನು ಮಾರಾಟ ಮಾಡಿದ್ದ ಪ್ರಕ್ರಿಯೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘಿಸಿದ ಕೆಎಚ್ಬಿಗೆ ₹1 ಲಕ್ಷ ದಂಡ ವಿಧಿಸಿದೆ.</p>.<p>ಕೆ.ಎ.ಚಂದ್ರಶೇಖರ್ ಮತ್ತು ಇತರ ಮೂವರು ಸ್ಥಳೀಯರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ‘ವರ್ಗಾವಣೆಗೊಂಡ 10 ನೌಕರರು ಮನೆ ಖಾಲಿ ಮಾಡಬೇಕಾದ ಸಂದರ್ಭದಲ್ಲಿ ಅವರಿಗೇ ಕೆಎಚ್ಬಿ ಮಾರಾಟ ಮಾಡಿದೆ. ಇದು ಮಂಡಳಿಯ ನಿಯಮಗಳ ಉಲ್ಲಂಘನೆ ಮತ್ತು ಹೈಕೋರ್ಟ್ ಆದೇಶಕ್ಕೆ ವಿರುದ್ಧವಾಗಿದೆ’ ಎಂದು ಆರೋಪಿಸಿದ್ದರು.</p>.<p>‘ಈ ರೀತಿಯ ಅಭ್ಯಾಸಕ್ಕೆ ಒಮ್ಮೆ ಅನುಮತಿ ನೀಡಿದರೆ ಸರ್ಕಾರದ ಮನೆ ಮತ್ತು ಆಸ್ತಿಗಳನ್ನು ಹಾಲಿ ಮತ್ತು ನಿವೃತ್ತ ನೌಕರರಿಗೆ ಕೆಎಚ್ಬಿ ಮಾರಾಟ ಮಾಡಿಬಿಡುತ್ತದೆ’ ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ಹೇಳಿತು.</p>.<p>‘ಕಾರ್ಯವಿಧಾನಗಳನ್ನು ಅನುಸರಿಸದೆ ಕೆಎಚ್ಬಿ ತನ್ನ ಆಸ್ತಿಯನ್ನು ಯಾವುದೇ ವ್ಯಕ್ತಿಗೆ ಮಾರಾಟ ಅಥವಾ ಗುತ್ತಿಗೆ ಆಧಾರದಲ್ಲಿ ನೀಡಬಾರದು. ವಸತಿ ಗೃಹ ಖರೀದಿ ಮಾಡಿದ್ದ 10 ಜನರಿಗೆ ಶೇ 12.5ರ ಬಡ್ಡಿ ದರದಲ್ಲಿ ಮೊತ್ತ ಮರು ಪಾವತಿ ಮಾಡಬೇಕು’ ಎಂದು ಆದೇಶಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>