‘ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಅವರು ಕೈಗೊಂಡಿರುವ ಈ ಕ್ರಮ ಶ್ಲಾಘನೀಯ. ಹೈಕೋರ್ಟ್ನ ಬೇರೆ ಕೊಠಡಿಗಳಲ್ಲೂ ನೇರ ಪ್ರಸಾರ ಕಲ್ಪಿಸುತ್ತಾರೆ ಎಂದು ನಿರೀಕ್ಷಿಸುತ್ತೇವೆ. ಜಿಲ್ಲಾ ನ್ಯಾಯಾಲಯಗಳಿಗೂ ಈ ಸೌಲಭ್ಯ ವಿಸ್ತರಣೆಯಾದರೆ ಸೂಕ್ತ. ಎಲ್ಲರಲ್ಲೂ ಹೆಚ್ಚಿನ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಕಾಣಬಹುದು’ ಎಂದು ಸುಪ್ರೀಂ ಕೋರ್ಟ್ ವಕೀಲ ಕೆ.ವಿ. ಧನಂಜಯ ಅಭಿಪ್ರಾಯಪಟ್ಟರು.